ಚಿತ್ರ ಮಂಜರಿ

ಕಾಂತಾರ ಗತ್ತು ಗೂಗಲ್‌ಗೂ ಗೊತ್ತು; ಹೆಚ್ಚಾಯ್ತು ನಿರೀಕ್ಷೆ, ಕ್ರೇಜ್‌

ನಿನ್ನೆಯಷ್ಟೇ ( ನವೆಂಬರ್‌ 27 ) ಚಾಪ್ಟರ್‌ ಒಂದರ ಮುಹೂರ್ತ ಆಚರಿಸಿಕೊಂಡ ಕಾಂತಾರ ಚಿತ್ರತಂಡ ವಿಶೇಷ ಫಸ್ಟ್‌ಲುಕ್‌ ಟೀಸರ್‌ ಬಿಡುಗಡೆ ಮಾಡುವ ಮೂಲಕ ಕಾಂತಾರ ಪ್ರೀಕ್ವೆಲ್‌ ಮೇಲೆ ವೀಕ್ಷರಿಗಿದ್ದ ನಿರೀಕ್ಷೆಯನ್ನು ದುಪ್ಪಟ್ಟಾಗುವಂತೆ ಮಾಡಿದೆ.

ಕಾಂತಾರ 2ನಲ್ಲಿ ಕರಾವಳಿ ಭಾಗದ ಜನರ ದೈವಾರಾಧನೆ ಭೂತಕೋಲದ ಮಹತ್ವವನ್ನು ಸಾರಿ ಹೇಳಿದ್ದ ನಿರ್ದೇಶಕ ರಿಷಬ್‌ ಶೆಟ್ಟಿ ಇಡೀ ದೇಶದ ಜನತೆಯ ಮನಸ್ಸನ್ನು ಗೆದ್ದಿದ್ದರು. ಈ ಬೃಹತ್ ಗೆಲುವಿನ ಬೆನ್ನಲ್ಲೇ ರಿಷಬ್‌ ಶೆಟ್ಟಿ ಕಾಂತಾರ ಮೊದಲ ಭಾಗವನ್ನು ಘೋಷಿಸಿ ಭೂತಾರಾಧನೆ, ಪಂಜುರ್ಲಿ ಹಾಗೂ ಗುಳಿಗ ದೇವರುಗಳ ಇತಿಹಾಸವನ್ನು ಬಿಚ್ಚಿಡಲು ಮುಂದಾಗಿದ್ದಾರೆ.

ಈ ಬಾರಿ ದೊಡ್ಡ ಬಜೆಟ್‌ನೊಂದಿಗೆ ಚಿತ್ರವನ್ನು ಆರಂಭಿಸಿರುವ ಚಿತ್ರತಂಡ ಈ ಫಸ್ಟ್‌ಲುಕ್‌ ಟೀಸರ್‌ ಮೂಲಕ ದೇಶವ್ಯಾಪಿ ಸದ್ದು ಮಾಡಿದೆ. ಈ ಸದ್ದು ಎಷ್ಟರ ಮಟ್ಟಿಗೆ ಇದೆ ಎಂದರೆ ಗೂಗಲ್‌ ಇಂಡಿಯಾ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಕಾಂತಾರ ಅಧ್ಯಾಯ 1ರ ಬಿಡುಗಡೆ ದಿನಾಂಕದ ಫೋಟೊವನ್ನು ಹಂಚಿಕೊಂಡು ಫಸ್ಟ್‌ಲುಕ್‌ ಬಗ್ಗೆ ಬರೆದುಕೊಂಡಿದೆ.

“2024 ಮತ್ತಷ್ಟು ಕಾತರತೆಯನ್ನು ಪಡೆದುಕೊಂಡಿದೆ. ಈಗ ತಾನೇ ಕಾಂತಾರ ಫಸ್ಟ್‌ಲುಕ್‌ ಟೀಸರ್‌ ನೋಡಿದೆ ಹಾಗೂ ವೋಹ್‌….. ಎಂದು ಕೂಗಬೇಕೆನಿಸುತ್ತಿದೆ” ಎಂದು ಗೂಗಲ್‌ ಇಂಡಿಯಾ ಬರೆದುಕೊಂಡಿದೆ. ಕನ್ನಡ ಚಿತ್ರವೊಂದರ ಬಗ್ಗೆ ಗೂಗಲ್‌ ಈ ರೀತಿಯ ಟ್ವೀಟ್‌ ಮಾಡಿರುವುದನ್ನು ಕಂಡು ಕನ್ನಡಿಗರು ಹಾಗೂ ಕಾಂತಾರ ಚಿತ್ರತಂಡ ಸಂತಸ ವ್ಯಕ್ತಪಡಿಸಿದ್ದಾರೆ.

andolana

Recent Posts

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

8 mins ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

22 mins ago

ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…

30 mins ago

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

47 mins ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

1 hour ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

2 hours ago