ಚಿತ್ರ ಮಂಜರಿ

ಕಾಂತಾರ ಗತ್ತು ಗೂಗಲ್‌ಗೂ ಗೊತ್ತು; ಹೆಚ್ಚಾಯ್ತು ನಿರೀಕ್ಷೆ, ಕ್ರೇಜ್‌

ನಿನ್ನೆಯಷ್ಟೇ ( ನವೆಂಬರ್‌ 27 ) ಚಾಪ್ಟರ್‌ ಒಂದರ ಮುಹೂರ್ತ ಆಚರಿಸಿಕೊಂಡ ಕಾಂತಾರ ಚಿತ್ರತಂಡ ವಿಶೇಷ ಫಸ್ಟ್‌ಲುಕ್‌ ಟೀಸರ್‌ ಬಿಡುಗಡೆ ಮಾಡುವ ಮೂಲಕ ಕಾಂತಾರ ಪ್ರೀಕ್ವೆಲ್‌ ಮೇಲೆ ವೀಕ್ಷರಿಗಿದ್ದ ನಿರೀಕ್ಷೆಯನ್ನು ದುಪ್ಪಟ್ಟಾಗುವಂತೆ ಮಾಡಿದೆ.

ಕಾಂತಾರ 2ನಲ್ಲಿ ಕರಾವಳಿ ಭಾಗದ ಜನರ ದೈವಾರಾಧನೆ ಭೂತಕೋಲದ ಮಹತ್ವವನ್ನು ಸಾರಿ ಹೇಳಿದ್ದ ನಿರ್ದೇಶಕ ರಿಷಬ್‌ ಶೆಟ್ಟಿ ಇಡೀ ದೇಶದ ಜನತೆಯ ಮನಸ್ಸನ್ನು ಗೆದ್ದಿದ್ದರು. ಈ ಬೃಹತ್ ಗೆಲುವಿನ ಬೆನ್ನಲ್ಲೇ ರಿಷಬ್‌ ಶೆಟ್ಟಿ ಕಾಂತಾರ ಮೊದಲ ಭಾಗವನ್ನು ಘೋಷಿಸಿ ಭೂತಾರಾಧನೆ, ಪಂಜುರ್ಲಿ ಹಾಗೂ ಗುಳಿಗ ದೇವರುಗಳ ಇತಿಹಾಸವನ್ನು ಬಿಚ್ಚಿಡಲು ಮುಂದಾಗಿದ್ದಾರೆ.

ಈ ಬಾರಿ ದೊಡ್ಡ ಬಜೆಟ್‌ನೊಂದಿಗೆ ಚಿತ್ರವನ್ನು ಆರಂಭಿಸಿರುವ ಚಿತ್ರತಂಡ ಈ ಫಸ್ಟ್‌ಲುಕ್‌ ಟೀಸರ್‌ ಮೂಲಕ ದೇಶವ್ಯಾಪಿ ಸದ್ದು ಮಾಡಿದೆ. ಈ ಸದ್ದು ಎಷ್ಟರ ಮಟ್ಟಿಗೆ ಇದೆ ಎಂದರೆ ಗೂಗಲ್‌ ಇಂಡಿಯಾ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಕಾಂತಾರ ಅಧ್ಯಾಯ 1ರ ಬಿಡುಗಡೆ ದಿನಾಂಕದ ಫೋಟೊವನ್ನು ಹಂಚಿಕೊಂಡು ಫಸ್ಟ್‌ಲುಕ್‌ ಬಗ್ಗೆ ಬರೆದುಕೊಂಡಿದೆ.

“2024 ಮತ್ತಷ್ಟು ಕಾತರತೆಯನ್ನು ಪಡೆದುಕೊಂಡಿದೆ. ಈಗ ತಾನೇ ಕಾಂತಾರ ಫಸ್ಟ್‌ಲುಕ್‌ ಟೀಸರ್‌ ನೋಡಿದೆ ಹಾಗೂ ವೋಹ್‌….. ಎಂದು ಕೂಗಬೇಕೆನಿಸುತ್ತಿದೆ” ಎಂದು ಗೂಗಲ್‌ ಇಂಡಿಯಾ ಬರೆದುಕೊಂಡಿದೆ. ಕನ್ನಡ ಚಿತ್ರವೊಂದರ ಬಗ್ಗೆ ಗೂಗಲ್‌ ಈ ರೀತಿಯ ಟ್ವೀಟ್‌ ಮಾಡಿರುವುದನ್ನು ಕಂಡು ಕನ್ನಡಿಗರು ಹಾಗೂ ಕಾಂತಾರ ಚಿತ್ರತಂಡ ಸಂತಸ ವ್ಯಕ್ತಪಡಿಸಿದ್ದಾರೆ.

andolana

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

9 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

9 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

10 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

10 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

10 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

10 hours ago