ಚಿತ್ರ ಮಂಜರಿ

ಕಾಂತಾರ ಗತ್ತು ಗೂಗಲ್‌ಗೂ ಗೊತ್ತು; ಹೆಚ್ಚಾಯ್ತು ನಿರೀಕ್ಷೆ, ಕ್ರೇಜ್‌

ನಿನ್ನೆಯಷ್ಟೇ ( ನವೆಂಬರ್‌ 27 ) ಚಾಪ್ಟರ್‌ ಒಂದರ ಮುಹೂರ್ತ ಆಚರಿಸಿಕೊಂಡ ಕಾಂತಾರ ಚಿತ್ರತಂಡ ವಿಶೇಷ ಫಸ್ಟ್‌ಲುಕ್‌ ಟೀಸರ್‌ ಬಿಡುಗಡೆ ಮಾಡುವ ಮೂಲಕ ಕಾಂತಾರ ಪ್ರೀಕ್ವೆಲ್‌ ಮೇಲೆ ವೀಕ್ಷರಿಗಿದ್ದ ನಿರೀಕ್ಷೆಯನ್ನು ದುಪ್ಪಟ್ಟಾಗುವಂತೆ ಮಾಡಿದೆ.

ಕಾಂತಾರ 2ನಲ್ಲಿ ಕರಾವಳಿ ಭಾಗದ ಜನರ ದೈವಾರಾಧನೆ ಭೂತಕೋಲದ ಮಹತ್ವವನ್ನು ಸಾರಿ ಹೇಳಿದ್ದ ನಿರ್ದೇಶಕ ರಿಷಬ್‌ ಶೆಟ್ಟಿ ಇಡೀ ದೇಶದ ಜನತೆಯ ಮನಸ್ಸನ್ನು ಗೆದ್ದಿದ್ದರು. ಈ ಬೃಹತ್ ಗೆಲುವಿನ ಬೆನ್ನಲ್ಲೇ ರಿಷಬ್‌ ಶೆಟ್ಟಿ ಕಾಂತಾರ ಮೊದಲ ಭಾಗವನ್ನು ಘೋಷಿಸಿ ಭೂತಾರಾಧನೆ, ಪಂಜುರ್ಲಿ ಹಾಗೂ ಗುಳಿಗ ದೇವರುಗಳ ಇತಿಹಾಸವನ್ನು ಬಿಚ್ಚಿಡಲು ಮುಂದಾಗಿದ್ದಾರೆ.

ಈ ಬಾರಿ ದೊಡ್ಡ ಬಜೆಟ್‌ನೊಂದಿಗೆ ಚಿತ್ರವನ್ನು ಆರಂಭಿಸಿರುವ ಚಿತ್ರತಂಡ ಈ ಫಸ್ಟ್‌ಲುಕ್‌ ಟೀಸರ್‌ ಮೂಲಕ ದೇಶವ್ಯಾಪಿ ಸದ್ದು ಮಾಡಿದೆ. ಈ ಸದ್ದು ಎಷ್ಟರ ಮಟ್ಟಿಗೆ ಇದೆ ಎಂದರೆ ಗೂಗಲ್‌ ಇಂಡಿಯಾ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಕಾಂತಾರ ಅಧ್ಯಾಯ 1ರ ಬಿಡುಗಡೆ ದಿನಾಂಕದ ಫೋಟೊವನ್ನು ಹಂಚಿಕೊಂಡು ಫಸ್ಟ್‌ಲುಕ್‌ ಬಗ್ಗೆ ಬರೆದುಕೊಂಡಿದೆ.

“2024 ಮತ್ತಷ್ಟು ಕಾತರತೆಯನ್ನು ಪಡೆದುಕೊಂಡಿದೆ. ಈಗ ತಾನೇ ಕಾಂತಾರ ಫಸ್ಟ್‌ಲುಕ್‌ ಟೀಸರ್‌ ನೋಡಿದೆ ಹಾಗೂ ವೋಹ್‌….. ಎಂದು ಕೂಗಬೇಕೆನಿಸುತ್ತಿದೆ” ಎಂದು ಗೂಗಲ್‌ ಇಂಡಿಯಾ ಬರೆದುಕೊಂಡಿದೆ. ಕನ್ನಡ ಚಿತ್ರವೊಂದರ ಬಗ್ಗೆ ಗೂಗಲ್‌ ಈ ರೀತಿಯ ಟ್ವೀಟ್‌ ಮಾಡಿರುವುದನ್ನು ಕಂಡು ಕನ್ನಡಿಗರು ಹಾಗೂ ಕಾಂತಾರ ಚಿತ್ರತಂಡ ಸಂತಸ ವ್ಯಕ್ತಪಡಿಸಿದ್ದಾರೆ.

andolana

Recent Posts

ಬಾಗಲಕೋಟೆ ಉಪಚುನಾವಣೆ : ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ

ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…

5 mins ago

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

20 mins ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

37 mins ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

41 mins ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

59 mins ago

ಹೆಚ್ಚುವರಿಯಾಗಿ 1 ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ; ನೋಂದಣಿ ಕಡ್ಡಾಯ : ಸಚಿವ ಮುನಿಯಪ್ಪ

ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…

1 hour ago