ಚಿತ್ರ ಮಂಜರಿ

ಕಾಂತಾರ ಗತ್ತು ಗೂಗಲ್‌ಗೂ ಗೊತ್ತು; ಹೆಚ್ಚಾಯ್ತು ನಿರೀಕ್ಷೆ, ಕ್ರೇಜ್‌

ನಿನ್ನೆಯಷ್ಟೇ ( ನವೆಂಬರ್‌ 27 ) ಚಾಪ್ಟರ್‌ ಒಂದರ ಮುಹೂರ್ತ ಆಚರಿಸಿಕೊಂಡ ಕಾಂತಾರ ಚಿತ್ರತಂಡ ವಿಶೇಷ ಫಸ್ಟ್‌ಲುಕ್‌ ಟೀಸರ್‌ ಬಿಡುಗಡೆ ಮಾಡುವ ಮೂಲಕ ಕಾಂತಾರ ಪ್ರೀಕ್ವೆಲ್‌ ಮೇಲೆ ವೀಕ್ಷರಿಗಿದ್ದ ನಿರೀಕ್ಷೆಯನ್ನು ದುಪ್ಪಟ್ಟಾಗುವಂತೆ ಮಾಡಿದೆ.

ಕಾಂತಾರ 2ನಲ್ಲಿ ಕರಾವಳಿ ಭಾಗದ ಜನರ ದೈವಾರಾಧನೆ ಭೂತಕೋಲದ ಮಹತ್ವವನ್ನು ಸಾರಿ ಹೇಳಿದ್ದ ನಿರ್ದೇಶಕ ರಿಷಬ್‌ ಶೆಟ್ಟಿ ಇಡೀ ದೇಶದ ಜನತೆಯ ಮನಸ್ಸನ್ನು ಗೆದ್ದಿದ್ದರು. ಈ ಬೃಹತ್ ಗೆಲುವಿನ ಬೆನ್ನಲ್ಲೇ ರಿಷಬ್‌ ಶೆಟ್ಟಿ ಕಾಂತಾರ ಮೊದಲ ಭಾಗವನ್ನು ಘೋಷಿಸಿ ಭೂತಾರಾಧನೆ, ಪಂಜುರ್ಲಿ ಹಾಗೂ ಗುಳಿಗ ದೇವರುಗಳ ಇತಿಹಾಸವನ್ನು ಬಿಚ್ಚಿಡಲು ಮುಂದಾಗಿದ್ದಾರೆ.

ಈ ಬಾರಿ ದೊಡ್ಡ ಬಜೆಟ್‌ನೊಂದಿಗೆ ಚಿತ್ರವನ್ನು ಆರಂಭಿಸಿರುವ ಚಿತ್ರತಂಡ ಈ ಫಸ್ಟ್‌ಲುಕ್‌ ಟೀಸರ್‌ ಮೂಲಕ ದೇಶವ್ಯಾಪಿ ಸದ್ದು ಮಾಡಿದೆ. ಈ ಸದ್ದು ಎಷ್ಟರ ಮಟ್ಟಿಗೆ ಇದೆ ಎಂದರೆ ಗೂಗಲ್‌ ಇಂಡಿಯಾ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಕಾಂತಾರ ಅಧ್ಯಾಯ 1ರ ಬಿಡುಗಡೆ ದಿನಾಂಕದ ಫೋಟೊವನ್ನು ಹಂಚಿಕೊಂಡು ಫಸ್ಟ್‌ಲುಕ್‌ ಬಗ್ಗೆ ಬರೆದುಕೊಂಡಿದೆ.

“2024 ಮತ್ತಷ್ಟು ಕಾತರತೆಯನ್ನು ಪಡೆದುಕೊಂಡಿದೆ. ಈಗ ತಾನೇ ಕಾಂತಾರ ಫಸ್ಟ್‌ಲುಕ್‌ ಟೀಸರ್‌ ನೋಡಿದೆ ಹಾಗೂ ವೋಹ್‌….. ಎಂದು ಕೂಗಬೇಕೆನಿಸುತ್ತಿದೆ” ಎಂದು ಗೂಗಲ್‌ ಇಂಡಿಯಾ ಬರೆದುಕೊಂಡಿದೆ. ಕನ್ನಡ ಚಿತ್ರವೊಂದರ ಬಗ್ಗೆ ಗೂಗಲ್‌ ಈ ರೀತಿಯ ಟ್ವೀಟ್‌ ಮಾಡಿರುವುದನ್ನು ಕಂಡು ಕನ್ನಡಿಗರು ಹಾಗೂ ಕಾಂತಾರ ಚಿತ್ರತಂಡ ಸಂತಸ ವ್ಯಕ್ತಪಡಿಸಿದ್ದಾರೆ.

andolana

Recent Posts

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

10 mins ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

38 mins ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

1 hour ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

2 hours ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

2 hours ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

2 hours ago