ನಿನ್ನೆಯಷ್ಟೇ ( ನವೆಂಬರ್ 27 ) ಚಾಪ್ಟರ್ ಒಂದರ ಮುಹೂರ್ತ ಆಚರಿಸಿಕೊಂಡ ಕಾಂತಾರ ಚಿತ್ರತಂಡ ವಿಶೇಷ ಫಸ್ಟ್ಲುಕ್ ಟೀಸರ್ ಬಿಡುಗಡೆ ಮಾಡುವ ಮೂಲಕ ಕಾಂತಾರ ಪ್ರೀಕ್ವೆಲ್ ಮೇಲೆ ವೀಕ್ಷರಿಗಿದ್ದ ನಿರೀಕ್ಷೆಯನ್ನು ದುಪ್ಪಟ್ಟಾಗುವಂತೆ ಮಾಡಿದೆ.
ಕಾಂತಾರ 2ನಲ್ಲಿ ಕರಾವಳಿ ಭಾಗದ ಜನರ ದೈವಾರಾಧನೆ ಭೂತಕೋಲದ ಮಹತ್ವವನ್ನು ಸಾರಿ ಹೇಳಿದ್ದ ನಿರ್ದೇಶಕ ರಿಷಬ್ ಶೆಟ್ಟಿ ಇಡೀ ದೇಶದ ಜನತೆಯ ಮನಸ್ಸನ್ನು ಗೆದ್ದಿದ್ದರು. ಈ ಬೃಹತ್ ಗೆಲುವಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಕಾಂತಾರ ಮೊದಲ ಭಾಗವನ್ನು ಘೋಷಿಸಿ ಭೂತಾರಾಧನೆ, ಪಂಜುರ್ಲಿ ಹಾಗೂ ಗುಳಿಗ ದೇವರುಗಳ ಇತಿಹಾಸವನ್ನು ಬಿಚ್ಚಿಡಲು ಮುಂದಾಗಿದ್ದಾರೆ.
ಈ ಬಾರಿ ದೊಡ್ಡ ಬಜೆಟ್ನೊಂದಿಗೆ ಚಿತ್ರವನ್ನು ಆರಂಭಿಸಿರುವ ಚಿತ್ರತಂಡ ಈ ಫಸ್ಟ್ಲುಕ್ ಟೀಸರ್ ಮೂಲಕ ದೇಶವ್ಯಾಪಿ ಸದ್ದು ಮಾಡಿದೆ. ಈ ಸದ್ದು ಎಷ್ಟರ ಮಟ್ಟಿಗೆ ಇದೆ ಎಂದರೆ ಗೂಗಲ್ ಇಂಡಿಯಾ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕಾಂತಾರ ಅಧ್ಯಾಯ 1ರ ಬಿಡುಗಡೆ ದಿನಾಂಕದ ಫೋಟೊವನ್ನು ಹಂಚಿಕೊಂಡು ಫಸ್ಟ್ಲುಕ್ ಬಗ್ಗೆ ಬರೆದುಕೊಂಡಿದೆ.
“2024 ಮತ್ತಷ್ಟು ಕಾತರತೆಯನ್ನು ಪಡೆದುಕೊಂಡಿದೆ. ಈಗ ತಾನೇ ಕಾಂತಾರ ಫಸ್ಟ್ಲುಕ್ ಟೀಸರ್ ನೋಡಿದೆ ಹಾಗೂ ವೋಹ್….. ಎಂದು ಕೂಗಬೇಕೆನಿಸುತ್ತಿದೆ” ಎಂದು ಗೂಗಲ್ ಇಂಡಿಯಾ ಬರೆದುಕೊಂಡಿದೆ. ಕನ್ನಡ ಚಿತ್ರವೊಂದರ ಬಗ್ಗೆ ಗೂಗಲ್ ಈ ರೀತಿಯ ಟ್ವೀಟ್ ಮಾಡಿರುವುದನ್ನು ಕಂಡು ಕನ್ನಡಿಗರು ಹಾಗೂ ಕಾಂತಾರ ಚಿತ್ರತಂಡ ಸಂತಸ ವ್ಯಕ್ತಪಡಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…