ಚಿತ್ರ ಮಂಜರಿ

ಕಾಂತಾರ ಗತ್ತು ಗೂಗಲ್‌ಗೂ ಗೊತ್ತು; ಹೆಚ್ಚಾಯ್ತು ನಿರೀಕ್ಷೆ, ಕ್ರೇಜ್‌

ನಿನ್ನೆಯಷ್ಟೇ ( ನವೆಂಬರ್‌ 27 ) ಚಾಪ್ಟರ್‌ ಒಂದರ ಮುಹೂರ್ತ ಆಚರಿಸಿಕೊಂಡ ಕಾಂತಾರ ಚಿತ್ರತಂಡ ವಿಶೇಷ ಫಸ್ಟ್‌ಲುಕ್‌ ಟೀಸರ್‌ ಬಿಡುಗಡೆ ಮಾಡುವ ಮೂಲಕ ಕಾಂತಾರ ಪ್ರೀಕ್ವೆಲ್‌ ಮೇಲೆ ವೀಕ್ಷರಿಗಿದ್ದ ನಿರೀಕ್ಷೆಯನ್ನು ದುಪ್ಪಟ್ಟಾಗುವಂತೆ ಮಾಡಿದೆ.

ಕಾಂತಾರ 2ನಲ್ಲಿ ಕರಾವಳಿ ಭಾಗದ ಜನರ ದೈವಾರಾಧನೆ ಭೂತಕೋಲದ ಮಹತ್ವವನ್ನು ಸಾರಿ ಹೇಳಿದ್ದ ನಿರ್ದೇಶಕ ರಿಷಬ್‌ ಶೆಟ್ಟಿ ಇಡೀ ದೇಶದ ಜನತೆಯ ಮನಸ್ಸನ್ನು ಗೆದ್ದಿದ್ದರು. ಈ ಬೃಹತ್ ಗೆಲುವಿನ ಬೆನ್ನಲ್ಲೇ ರಿಷಬ್‌ ಶೆಟ್ಟಿ ಕಾಂತಾರ ಮೊದಲ ಭಾಗವನ್ನು ಘೋಷಿಸಿ ಭೂತಾರಾಧನೆ, ಪಂಜುರ್ಲಿ ಹಾಗೂ ಗುಳಿಗ ದೇವರುಗಳ ಇತಿಹಾಸವನ್ನು ಬಿಚ್ಚಿಡಲು ಮುಂದಾಗಿದ್ದಾರೆ.

ಈ ಬಾರಿ ದೊಡ್ಡ ಬಜೆಟ್‌ನೊಂದಿಗೆ ಚಿತ್ರವನ್ನು ಆರಂಭಿಸಿರುವ ಚಿತ್ರತಂಡ ಈ ಫಸ್ಟ್‌ಲುಕ್‌ ಟೀಸರ್‌ ಮೂಲಕ ದೇಶವ್ಯಾಪಿ ಸದ್ದು ಮಾಡಿದೆ. ಈ ಸದ್ದು ಎಷ್ಟರ ಮಟ್ಟಿಗೆ ಇದೆ ಎಂದರೆ ಗೂಗಲ್‌ ಇಂಡಿಯಾ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಕಾಂತಾರ ಅಧ್ಯಾಯ 1ರ ಬಿಡುಗಡೆ ದಿನಾಂಕದ ಫೋಟೊವನ್ನು ಹಂಚಿಕೊಂಡು ಫಸ್ಟ್‌ಲುಕ್‌ ಬಗ್ಗೆ ಬರೆದುಕೊಂಡಿದೆ.

“2024 ಮತ್ತಷ್ಟು ಕಾತರತೆಯನ್ನು ಪಡೆದುಕೊಂಡಿದೆ. ಈಗ ತಾನೇ ಕಾಂತಾರ ಫಸ್ಟ್‌ಲುಕ್‌ ಟೀಸರ್‌ ನೋಡಿದೆ ಹಾಗೂ ವೋಹ್‌….. ಎಂದು ಕೂಗಬೇಕೆನಿಸುತ್ತಿದೆ” ಎಂದು ಗೂಗಲ್‌ ಇಂಡಿಯಾ ಬರೆದುಕೊಂಡಿದೆ. ಕನ್ನಡ ಚಿತ್ರವೊಂದರ ಬಗ್ಗೆ ಗೂಗಲ್‌ ಈ ರೀತಿಯ ಟ್ವೀಟ್‌ ಮಾಡಿರುವುದನ್ನು ಕಂಡು ಕನ್ನಡಿಗರು ಹಾಗೂ ಕಾಂತಾರ ಚಿತ್ರತಂಡ ಸಂತಸ ವ್ಯಕ್ತಪಡಿಸಿದ್ದಾರೆ.

andolana

Recent Posts

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

4 mins ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

40 mins ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

1 hour ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

2 hours ago

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

3 hours ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

3 hours ago