ಚಿತ್ರ ಮಂಜರಿ

‘ಧೀರ’ನಾಗಿ ಬರಲಿದ್ದಾರೆ ಹ್ಯಾಟ್ರಿಕ್ ಹೀರೋ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶಿವಣ್ಣ ಅಭಿನಯಿಸಲಿರುವ ಅನೇಕ ಚಲನಚಿತ್ರಗಳ, ಸಿನಿಮಾ ಶೀರ್ಷಿಕೆಗಳು ಅನೌನ್ಸ್ ಆಗಿದೆ. ಆ ಚಿತ್ರಗಳಲ್ಲಿ ‘ಧೀರ’ ಚಿತ್ರವೂ ಒಂದು. ಹೆಚ್.ಸಿ. ಶ್ರೀನಿವಾಸ್ (ಶಿಲ್ಪ ಶ್ರೀನಿವಾಸ್) ಅರ್ಪಿಸುತ್ತಿರುವ ಈ ಚಿತ್ರವನ್ನು ಚಿಲ್ಲಿ ಫಿಲಂಸ್ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ಸಾಗರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ನವೀನ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ‌.

ಸಿನಿಮಾ ನಟನಾಗಬೇಕೆಂಬ ಕನಸು ಹೊತ್ತು 12 ವರ್ಷಗಳ ಹಿಂದೆ ಮಲೆನಾಡಿಂದ ಬೆಂಗಳೂರಿಗೆ ಬಂದ ನವೀನ್ ಶೆಟ್ಟಿ ಅವರು ಎಸ್. ನಾರಾಯಣ್, ಓಂ ಪ್ರಕಾಶ್ ರಾವ್, ಗಡ್ಡ ವಿಜಿ ಅವರ ಜೊತೆ ಸಹಾಯಕನಾಗಿ ಕೆಲಸ‌ ಮಾಡಿದ್ದಾರೆ. ಇಲ್ಲಿ ಬಂದಮೇಲೆ ನಿರ್ದೇಶನದ ಮೇಲೆ ಹೆಚ್ಚು ಆಸಕ್ತಿ ಹುಟ್ಟಿ ಅದರಲ್ಲೇ ಪರಿಣತಿ ಪಡೆದಿಕೊಂಡಿದ್ದಾರೆ. ನಂತರ ಓಟಿಟಿ ವೇದಿಕೆಗೆಂದೇ ‘ನಿಧಾನವಾಗಿ ಚಲಿಸಿ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಒಮ್ಮೆ ಆ ಚಿತ್ರವನ್ನು ವೀಕ್ಷಿಸಿದ ಶಿವಣ್ಣ ಮೆಚ್ಚಿ ಬೆನ್ನು ತಟ್ಟಿದ್ದಾರೆ. ಅದೇ ಸಮಯದಲ್ಲಿ ತಾವು ಶಿವಣ್ಣ ಅವರಿಗೆಂದೇ ಮಾಡಿಕೊಂಡಿದ್ದ ‘ಧೀರ’ ಕಥೆಯನ್ನು ಹೇಳಿ ಅವರನ್ನು ಒಪ್ಪಿಸಿದ್ದಾರೆ.

ತೆರೆಮೇಲೆ ಶಿವಣ್ಣ ಅವರನ್ನು ಬೇರೆಯದೇ ರೀತಿ ತೋರಿಸ ಹೊಟಿರುವ ನವೀನ್ ಶಟ್ಟಿ, ಮಾಸ್, ಅಂಡರ್ ವರ್ಲ್ಡ್, ಮ್ಯೂಸಿಕಲ್ ಆಕ್ಷನ್ ಡ್ರಾಮಾ ಸಬ್ಜೆಕ್ಟ್ ಅನ್ನು ಈ ಚಿತ್ರದಲ್ಲಿ ಹೇಳ ಹೊರಟಿದ್ದಾರೆ. ಕಲಿಯುಗ ಕರ್ಣ ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರಕ್ಕೆ ಎಂ.ಎನ್. ಕೃಪಾಕರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಧೀರ ಚಿತ್ರದ ಪ್ರಿಪ್ರೊಡಕ್ಷನ್ ವರ್ಕ್ ನಡೆಯುತ್ತಿದ್ದು, ಶೀಘ್ರದಲ್ಲೇ ನಾಯಕಿ ಸೇರಿದಂತೆ ಉಳಿದ ತಾಂತ್ರಿಕ ವರ್ಗವನ್ನು ಪ್ರಕಟಿಸಲಾಗುವುದು.

lokesh

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

1 hour ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

2 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

2 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

3 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago