ಚಿತ್ರ ಮಂಜರಿ

‘ಧೀರ’ನಾಗಿ ಬರಲಿದ್ದಾರೆ ಹ್ಯಾಟ್ರಿಕ್ ಹೀರೋ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶಿವಣ್ಣ ಅಭಿನಯಿಸಲಿರುವ ಅನೇಕ ಚಲನಚಿತ್ರಗಳ, ಸಿನಿಮಾ ಶೀರ್ಷಿಕೆಗಳು ಅನೌನ್ಸ್ ಆಗಿದೆ. ಆ ಚಿತ್ರಗಳಲ್ಲಿ ‘ಧೀರ’ ಚಿತ್ರವೂ ಒಂದು. ಹೆಚ್.ಸಿ. ಶ್ರೀನಿವಾಸ್ (ಶಿಲ್ಪ ಶ್ರೀನಿವಾಸ್) ಅರ್ಪಿಸುತ್ತಿರುವ ಈ ಚಿತ್ರವನ್ನು ಚಿಲ್ಲಿ ಫಿಲಂಸ್ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ಸಾಗರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ನವೀನ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ‌.

ಸಿನಿಮಾ ನಟನಾಗಬೇಕೆಂಬ ಕನಸು ಹೊತ್ತು 12 ವರ್ಷಗಳ ಹಿಂದೆ ಮಲೆನಾಡಿಂದ ಬೆಂಗಳೂರಿಗೆ ಬಂದ ನವೀನ್ ಶೆಟ್ಟಿ ಅವರು ಎಸ್. ನಾರಾಯಣ್, ಓಂ ಪ್ರಕಾಶ್ ರಾವ್, ಗಡ್ಡ ವಿಜಿ ಅವರ ಜೊತೆ ಸಹಾಯಕನಾಗಿ ಕೆಲಸ‌ ಮಾಡಿದ್ದಾರೆ. ಇಲ್ಲಿ ಬಂದಮೇಲೆ ನಿರ್ದೇಶನದ ಮೇಲೆ ಹೆಚ್ಚು ಆಸಕ್ತಿ ಹುಟ್ಟಿ ಅದರಲ್ಲೇ ಪರಿಣತಿ ಪಡೆದಿಕೊಂಡಿದ್ದಾರೆ. ನಂತರ ಓಟಿಟಿ ವೇದಿಕೆಗೆಂದೇ ‘ನಿಧಾನವಾಗಿ ಚಲಿಸಿ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಒಮ್ಮೆ ಆ ಚಿತ್ರವನ್ನು ವೀಕ್ಷಿಸಿದ ಶಿವಣ್ಣ ಮೆಚ್ಚಿ ಬೆನ್ನು ತಟ್ಟಿದ್ದಾರೆ. ಅದೇ ಸಮಯದಲ್ಲಿ ತಾವು ಶಿವಣ್ಣ ಅವರಿಗೆಂದೇ ಮಾಡಿಕೊಂಡಿದ್ದ ‘ಧೀರ’ ಕಥೆಯನ್ನು ಹೇಳಿ ಅವರನ್ನು ಒಪ್ಪಿಸಿದ್ದಾರೆ.

ತೆರೆಮೇಲೆ ಶಿವಣ್ಣ ಅವರನ್ನು ಬೇರೆಯದೇ ರೀತಿ ತೋರಿಸ ಹೊಟಿರುವ ನವೀನ್ ಶಟ್ಟಿ, ಮಾಸ್, ಅಂಡರ್ ವರ್ಲ್ಡ್, ಮ್ಯೂಸಿಕಲ್ ಆಕ್ಷನ್ ಡ್ರಾಮಾ ಸಬ್ಜೆಕ್ಟ್ ಅನ್ನು ಈ ಚಿತ್ರದಲ್ಲಿ ಹೇಳ ಹೊರಟಿದ್ದಾರೆ. ಕಲಿಯುಗ ಕರ್ಣ ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರಕ್ಕೆ ಎಂ.ಎನ್. ಕೃಪಾಕರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಧೀರ ಚಿತ್ರದ ಪ್ರಿಪ್ರೊಡಕ್ಷನ್ ವರ್ಕ್ ನಡೆಯುತ್ತಿದ್ದು, ಶೀಘ್ರದಲ್ಲೇ ನಾಯಕಿ ಸೇರಿದಂತೆ ಉಳಿದ ತಾಂತ್ರಿಕ ವರ್ಗವನ್ನು ಪ್ರಕಟಿಸಲಾಗುವುದು.

lokesh

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

1 hour ago

ಓದುಗರ ಪತ್ರ: ಕಳ್ಳಸಾಗಣೆ ಕಪಿಮುಷ್ಟಿಯಲ್ಲಿ ದೇಶದ ಆರ್ಥಿಕತೆ

ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…

1 hour ago

ಓದುಗರ ಪತ್ರ: ದ್ವಿಚಕ್ರವಾಹನಗಳಿಗೆ ದರ್ಪಣ(ಕನ್ನಡಿ) ಕಡ್ಡಾಯವಾಗಲಿ

ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…

1 hour ago

ಓದುಗರ ಪತ್ರ: ವಾಹನ ನಿಲುಗಡೆ ನಿಷೇಧಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…

1 hour ago

ರಸ್ತೆಗಳು ಅಧ್ವಾನ; ಸವಾರರು ಹೈರಾಣ!

ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…

1 hour ago

ವೈಭವದ ಸುತ್ತೂರು ಜಾತ್ರಾ ಮಹೋತ್ಸವ ಸಂಪನ್ನ

ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…

1 hour ago