ಚಿತ್ರ ಮಂಜರಿ

‘ಧೀರ’ನಾಗಿ ಬರಲಿದ್ದಾರೆ ಹ್ಯಾಟ್ರಿಕ್ ಹೀರೋ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶಿವಣ್ಣ ಅಭಿನಯಿಸಲಿರುವ ಅನೇಕ ಚಲನಚಿತ್ರಗಳ, ಸಿನಿಮಾ ಶೀರ್ಷಿಕೆಗಳು ಅನೌನ್ಸ್ ಆಗಿದೆ. ಆ ಚಿತ್ರಗಳಲ್ಲಿ ‘ಧೀರ’ ಚಿತ್ರವೂ ಒಂದು. ಹೆಚ್.ಸಿ. ಶ್ರೀನಿವಾಸ್ (ಶಿಲ್ಪ ಶ್ರೀನಿವಾಸ್) ಅರ್ಪಿಸುತ್ತಿರುವ ಈ ಚಿತ್ರವನ್ನು ಚಿಲ್ಲಿ ಫಿಲಂಸ್ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ಸಾಗರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ನವೀನ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ‌.

ಸಿನಿಮಾ ನಟನಾಗಬೇಕೆಂಬ ಕನಸು ಹೊತ್ತು 12 ವರ್ಷಗಳ ಹಿಂದೆ ಮಲೆನಾಡಿಂದ ಬೆಂಗಳೂರಿಗೆ ಬಂದ ನವೀನ್ ಶೆಟ್ಟಿ ಅವರು ಎಸ್. ನಾರಾಯಣ್, ಓಂ ಪ್ರಕಾಶ್ ರಾವ್, ಗಡ್ಡ ವಿಜಿ ಅವರ ಜೊತೆ ಸಹಾಯಕನಾಗಿ ಕೆಲಸ‌ ಮಾಡಿದ್ದಾರೆ. ಇಲ್ಲಿ ಬಂದಮೇಲೆ ನಿರ್ದೇಶನದ ಮೇಲೆ ಹೆಚ್ಚು ಆಸಕ್ತಿ ಹುಟ್ಟಿ ಅದರಲ್ಲೇ ಪರಿಣತಿ ಪಡೆದಿಕೊಂಡಿದ್ದಾರೆ. ನಂತರ ಓಟಿಟಿ ವೇದಿಕೆಗೆಂದೇ ‘ನಿಧಾನವಾಗಿ ಚಲಿಸಿ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಒಮ್ಮೆ ಆ ಚಿತ್ರವನ್ನು ವೀಕ್ಷಿಸಿದ ಶಿವಣ್ಣ ಮೆಚ್ಚಿ ಬೆನ್ನು ತಟ್ಟಿದ್ದಾರೆ. ಅದೇ ಸಮಯದಲ್ಲಿ ತಾವು ಶಿವಣ್ಣ ಅವರಿಗೆಂದೇ ಮಾಡಿಕೊಂಡಿದ್ದ ‘ಧೀರ’ ಕಥೆಯನ್ನು ಹೇಳಿ ಅವರನ್ನು ಒಪ್ಪಿಸಿದ್ದಾರೆ.

ತೆರೆಮೇಲೆ ಶಿವಣ್ಣ ಅವರನ್ನು ಬೇರೆಯದೇ ರೀತಿ ತೋರಿಸ ಹೊಟಿರುವ ನವೀನ್ ಶಟ್ಟಿ, ಮಾಸ್, ಅಂಡರ್ ವರ್ಲ್ಡ್, ಮ್ಯೂಸಿಕಲ್ ಆಕ್ಷನ್ ಡ್ರಾಮಾ ಸಬ್ಜೆಕ್ಟ್ ಅನ್ನು ಈ ಚಿತ್ರದಲ್ಲಿ ಹೇಳ ಹೊರಟಿದ್ದಾರೆ. ಕಲಿಯುಗ ಕರ್ಣ ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರಕ್ಕೆ ಎಂ.ಎನ್. ಕೃಪಾಕರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಧೀರ ಚಿತ್ರದ ಪ್ರಿಪ್ರೊಡಕ್ಷನ್ ವರ್ಕ್ ನಡೆಯುತ್ತಿದ್ದು, ಶೀಘ್ರದಲ್ಲೇ ನಾಯಕಿ ಸೇರಿದಂತೆ ಉಳಿದ ತಾಂತ್ರಿಕ ವರ್ಗವನ್ನು ಪ್ರಕಟಿಸಲಾಗುವುದು.

lokesh

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

11 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

11 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

12 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

13 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

13 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

15 hours ago