ಚಿತ್ರ ಮಂಜರಿ

‘ಧೀರ’ನಾಗಿ ಬರಲಿದ್ದಾರೆ ಹ್ಯಾಟ್ರಿಕ್ ಹೀರೋ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶಿವಣ್ಣ ಅಭಿನಯಿಸಲಿರುವ ಅನೇಕ ಚಲನಚಿತ್ರಗಳ, ಸಿನಿಮಾ ಶೀರ್ಷಿಕೆಗಳು ಅನೌನ್ಸ್ ಆಗಿದೆ. ಆ ಚಿತ್ರಗಳಲ್ಲಿ ‘ಧೀರ’ ಚಿತ್ರವೂ ಒಂದು. ಹೆಚ್.ಸಿ. ಶ್ರೀನಿವಾಸ್ (ಶಿಲ್ಪ ಶ್ರೀನಿವಾಸ್) ಅರ್ಪಿಸುತ್ತಿರುವ ಈ ಚಿತ್ರವನ್ನು ಚಿಲ್ಲಿ ಫಿಲಂಸ್ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ಸಾಗರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ನವೀನ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ‌.

ಸಿನಿಮಾ ನಟನಾಗಬೇಕೆಂಬ ಕನಸು ಹೊತ್ತು 12 ವರ್ಷಗಳ ಹಿಂದೆ ಮಲೆನಾಡಿಂದ ಬೆಂಗಳೂರಿಗೆ ಬಂದ ನವೀನ್ ಶೆಟ್ಟಿ ಅವರು ಎಸ್. ನಾರಾಯಣ್, ಓಂ ಪ್ರಕಾಶ್ ರಾವ್, ಗಡ್ಡ ವಿಜಿ ಅವರ ಜೊತೆ ಸಹಾಯಕನಾಗಿ ಕೆಲಸ‌ ಮಾಡಿದ್ದಾರೆ. ಇಲ್ಲಿ ಬಂದಮೇಲೆ ನಿರ್ದೇಶನದ ಮೇಲೆ ಹೆಚ್ಚು ಆಸಕ್ತಿ ಹುಟ್ಟಿ ಅದರಲ್ಲೇ ಪರಿಣತಿ ಪಡೆದಿಕೊಂಡಿದ್ದಾರೆ. ನಂತರ ಓಟಿಟಿ ವೇದಿಕೆಗೆಂದೇ ‘ನಿಧಾನವಾಗಿ ಚಲಿಸಿ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಒಮ್ಮೆ ಆ ಚಿತ್ರವನ್ನು ವೀಕ್ಷಿಸಿದ ಶಿವಣ್ಣ ಮೆಚ್ಚಿ ಬೆನ್ನು ತಟ್ಟಿದ್ದಾರೆ. ಅದೇ ಸಮಯದಲ್ಲಿ ತಾವು ಶಿವಣ್ಣ ಅವರಿಗೆಂದೇ ಮಾಡಿಕೊಂಡಿದ್ದ ‘ಧೀರ’ ಕಥೆಯನ್ನು ಹೇಳಿ ಅವರನ್ನು ಒಪ್ಪಿಸಿದ್ದಾರೆ.

ತೆರೆಮೇಲೆ ಶಿವಣ್ಣ ಅವರನ್ನು ಬೇರೆಯದೇ ರೀತಿ ತೋರಿಸ ಹೊಟಿರುವ ನವೀನ್ ಶಟ್ಟಿ, ಮಾಸ್, ಅಂಡರ್ ವರ್ಲ್ಡ್, ಮ್ಯೂಸಿಕಲ್ ಆಕ್ಷನ್ ಡ್ರಾಮಾ ಸಬ್ಜೆಕ್ಟ್ ಅನ್ನು ಈ ಚಿತ್ರದಲ್ಲಿ ಹೇಳ ಹೊರಟಿದ್ದಾರೆ. ಕಲಿಯುಗ ಕರ್ಣ ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರಕ್ಕೆ ಎಂ.ಎನ್. ಕೃಪಾಕರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಧೀರ ಚಿತ್ರದ ಪ್ರಿಪ್ರೊಡಕ್ಷನ್ ವರ್ಕ್ ನಡೆಯುತ್ತಿದ್ದು, ಶೀಘ್ರದಲ್ಲೇ ನಾಯಕಿ ಸೇರಿದಂತೆ ಉಳಿದ ತಾಂತ್ರಿಕ ವರ್ಗವನ್ನು ಪ್ರಕಟಿಸಲಾಗುವುದು.

lokesh

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

51 mins ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

3 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

3 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

8 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

8 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

8 hours ago