ಚಿತ್ರ ಮಂಜರಿ

ಮಗನ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡಿ ವಿಶ್ ಮಾಡಿದ ಎಚ್.ಡಿ.ಕೆ

ನಿಖಿಲ್ ಕುಮಾರಸ್ವಾಮಿ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಎಚ್.ಡಿ.ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ಲಕ್ಷ್ಮಣ್ ಅವರು ಈ ಚಿತ್ರದ ನಿರ್ದೇಶಕರು.

ಈ ಹಿಂದೆ ಸೀತಾರಾಮ ಕಲ್ಯಾಣ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ ಅವರು ಆಗಮಿಸಿದ್ದರು.ನಮ್ಮ ಸಂಸ್ಥೆಯ ನಿರ್ಮಾಣದ ಚಿತ್ರದಲ್ಲಿ ನೀವು ನಾಯಕರಾಗಿ ನಟಿಸಬೇಕು ಎಂದು ಸುಭಾಸ್ಕರನ್ ಹೇಳಿದ್ದರು. ಈಗ ಚಿತ್ರ ಆರಂಭವಾಗುತ್ತಿದೆ. ಈ ಚಿತ್ರಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿಖಿಲ್ ತಿಳಿಸಿದರು.

ತಮ್ಮ‌ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.

ಈ ಚಿತ್ರದಲ್ಲಿ ನಟಿಸುವಂತೆ ನಿಖಿಲ್ ಅವರು ಹೇಳಿದರು. ನಾನು ಕಥೆ ಕೇಳಿ ಒಪ್ಪಿಕೊಂಡೆ. ಕಥೆ ಚೆನ್ನಾಗಿದೆ ಎಂದು ನಟ ಕೋಮಲ್ ತಿಳಿಸಿದರು. ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರವಿದು. ಚಿತ್ರ ಯಶಸ್ವಿಯಾಗಲಿ ಎಂದು ಲೈಕಾ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ಸುಭಾಸ್ಕರನ್ ಹಾರೈಸಿದರು.

ನಾಯಕಿ ಯುಕ್ತಿ ತರೇಜ ಸಹ ನೂತನ ಚಿತ್ರದ ಕುರಿತು ಮಾತನಾಡಿದರು. ಹಲವಾರು ತಂತ್ರಜ್ಞರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

lokesh

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

50 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

1 hour ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago