ನಿಖಿಲ್ ಕುಮಾರಸ್ವಾಮಿ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಎಚ್.ಡಿ.ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.
ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ಲಕ್ಷ್ಮಣ್ ಅವರು ಈ ಚಿತ್ರದ ನಿರ್ದೇಶಕರು.
ಈ ಹಿಂದೆ ಸೀತಾರಾಮ ಕಲ್ಯಾಣ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ ಅವರು ಆಗಮಿಸಿದ್ದರು.ನಮ್ಮ ಸಂಸ್ಥೆಯ ನಿರ್ಮಾಣದ ಚಿತ್ರದಲ್ಲಿ ನೀವು ನಾಯಕರಾಗಿ ನಟಿಸಬೇಕು ಎಂದು ಸುಭಾಸ್ಕರನ್ ಹೇಳಿದ್ದರು. ಈಗ ಚಿತ್ರ ಆರಂಭವಾಗುತ್ತಿದೆ. ಈ ಚಿತ್ರಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿಖಿಲ್ ತಿಳಿಸಿದರು.
ತಮ್ಮ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.
ಈ ಚಿತ್ರದಲ್ಲಿ ನಟಿಸುವಂತೆ ನಿಖಿಲ್ ಅವರು ಹೇಳಿದರು. ನಾನು ಕಥೆ ಕೇಳಿ ಒಪ್ಪಿಕೊಂಡೆ. ಕಥೆ ಚೆನ್ನಾಗಿದೆ ಎಂದು ನಟ ಕೋಮಲ್ ತಿಳಿಸಿದರು. ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರವಿದು. ಚಿತ್ರ ಯಶಸ್ವಿಯಾಗಲಿ ಎಂದು ಲೈಕಾ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ಸುಭಾಸ್ಕರನ್ ಹಾರೈಸಿದರು.
ನಾಯಕಿ ಯುಕ್ತಿ ತರೇಜ ಸಹ ನೂತನ ಚಿತ್ರದ ಕುರಿತು ಮಾತನಾಡಿದರು. ಹಲವಾರು ತಂತ್ರಜ್ಞರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…