ಚಿತ್ರ ಮಂಜರಿ

ಮಗನ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡಿ ವಿಶ್ ಮಾಡಿದ ಎಚ್.ಡಿ.ಕೆ

ನಿಖಿಲ್ ಕುಮಾರಸ್ವಾಮಿ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಎಚ್.ಡಿ.ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ಲಕ್ಷ್ಮಣ್ ಅವರು ಈ ಚಿತ್ರದ ನಿರ್ದೇಶಕರು.

ಈ ಹಿಂದೆ ಸೀತಾರಾಮ ಕಲ್ಯಾಣ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ ಅವರು ಆಗಮಿಸಿದ್ದರು.ನಮ್ಮ ಸಂಸ್ಥೆಯ ನಿರ್ಮಾಣದ ಚಿತ್ರದಲ್ಲಿ ನೀವು ನಾಯಕರಾಗಿ ನಟಿಸಬೇಕು ಎಂದು ಸುಭಾಸ್ಕರನ್ ಹೇಳಿದ್ದರು. ಈಗ ಚಿತ್ರ ಆರಂಭವಾಗುತ್ತಿದೆ. ಈ ಚಿತ್ರಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿಖಿಲ್ ತಿಳಿಸಿದರು.

ತಮ್ಮ‌ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.

ಈ ಚಿತ್ರದಲ್ಲಿ ನಟಿಸುವಂತೆ ನಿಖಿಲ್ ಅವರು ಹೇಳಿದರು. ನಾನು ಕಥೆ ಕೇಳಿ ಒಪ್ಪಿಕೊಂಡೆ. ಕಥೆ ಚೆನ್ನಾಗಿದೆ ಎಂದು ನಟ ಕೋಮಲ್ ತಿಳಿಸಿದರು. ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರವಿದು. ಚಿತ್ರ ಯಶಸ್ವಿಯಾಗಲಿ ಎಂದು ಲೈಕಾ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ಸುಭಾಸ್ಕರನ್ ಹಾರೈಸಿದರು.

ನಾಯಕಿ ಯುಕ್ತಿ ತರೇಜ ಸಹ ನೂತನ ಚಿತ್ರದ ಕುರಿತು ಮಾತನಾಡಿದರು. ಹಲವಾರು ತಂತ್ರಜ್ಞರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

lokesh

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

1 hour ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

4 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

4 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

5 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

9 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

9 hours ago