ಚಿತ್ರ ಮಂಜರಿ

ಮಲೇಷ್ಯಾದಲ್ಲೂ ದಾಖಲೆ ಬರೆದ ಜೈಲರ್

ರಜನಿಕಾಂತ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡಿತ್ತು. ಆರು ನೂರ ಕೋಟಿಗೂ ಹೆಚ್ಚು ಹಣವನ್ನು ಅದು ಬಾಕ್ಸ್ ಆಫೀಸಿನಿಂದ ಬಾಚಿಕೊಂಡಿತ್ತು. ಹಲವಾರು ದಾಖಲೆಗಳನ್ನು ಕೂಡ ಚಿತ್ರ ನಿರ್ಮಾಣ ಮಾಡಿತ್ತು. ಇದೀಗ ಮಲೇಷ್ಯಾದಲ್ಲಿ ಸಿನಿಮಾ ದಾಖಲೆಯೊಂದನ್ನು ಬರೆದಿದೆ.

ಜೈಲರ್ ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗಿದ್ದು, ಈವರೆಗೂ ರಿಲೀಸ್ ಆದ ಭಾರತೀಯ ಚಿತ್ರಗಳಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಸಿನಿಮಾ ಎನ್ನುವ ಹೆಗ್ಗಳಿಕೆಯೂ ಅದು ಪಾತ್ರವಾಗಿದೆ.

ಜೈಲರ್ ಸಿನಿಮಾ ಭರ್ಜರಿ ಗೆಲುವು ಸಾಧಿಸಿದೆ. ಬಾಕ್ಸ್ ಆಫೀಸಿನಲ್ಲಿ ಭಾರೀ ಕಲೆಕ್ಷನ್ ಮಾಡಿದೆ. ಹೀಗಾಗಿ ನಿರ್ಮಾಪಕ ಕಲಾನಿಧಿ ಮಾರನ್, ಭರ್ಜರಿ ಉಡುಗೊರೆಗಳನ್ನು ಚಿತ್ರತಂಡಕ್ಕೆ ನೀಡುತ್ತಿದ್ದಾರೆ. ಚಿತ್ರದ ನಾಯಕ, ನಿರ್ದೇಶಕ, ಸಂಗೀತ ನಿರ್ದೇಶಕರಿಗೆ ಈಗಾಗಲೇ ಕಾರುಗಳ ಉಡುಗೊರೆ ನೀಡಿರುವ ನಿರ್ಮಾಪಕರು, ಇದೀಗ ಚಿತ್ರತಂಡದಲ್ಲಿ ಕೆಲಸ ಮಾಡಿದ ಮುನ್ನೂರಕ್ಕೂ ಹೆಚ್ಚು ಜನರಿಗೆ ಬಂಗಾರದ ಉಡುಗೊರೆ ನೀಡಿದೆ. ಸಕ್ಸಸ್ ಪಾರ್ಟಿಯಲ್ಲಿ ಚಿನ್ನವನ್ನು ಗಿಫ್ಟ್ ಆಗಿ ನೀಡಿದ್ದಾರೆ.

ಈ ಹಿಂದೆ ನಿರ್ಮಾಪಕ ಕಲಾನಿಧಿ ಮಾರನ್, ನಟ ರಜನಿಕಾಂತ್ ಅವರಿಗೆ ದುಬಾರಿ ಉಡುಗೊರೆಯನ್ನೇ ನೀಡಿದ್ದರು. ಈ ಸಿನಿಮಾಗಾಗಿ ರಜನಿ 250 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಮೊದಲ ಕಂತಾಗಿ 150 ಕೋಟಿ ರೂಪಾಯಿ ಸಂದಾಯವಾಗಿತ್ತು. ಎರಡನೇ ಕಂತು ನೂರು ಕೋಟಿ ರೂಪಾಯಿ ಮತ್ತು ಬಿಎಂಡಬ್ಲೂ ಎಕ್ಸ್ 7 ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಲಾಗಿದೆ. ಈ ಕಾರಿನ ಬೆಲೆ 1.50 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಜೈಲರ್ ಸಿನಿಮಾ ಈಗಲೂ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡುತ್ತಿದೆ. ಹಲವು ವರ್ಷಗಳ ನಂತರ ರಜನಿ ಇಂಥದ್ದೊಂದು ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಈ ಖುಷಿಯನ್ನು ಅವರು ಚಿತ್ರತಂಡದ ಜೊತೆಗೆ ಹಂಚಿಕೊಂಡಿದ್ದರು.

ಜೈಲರ್ ಸಿನಿಮಾದ ಚಿತ್ರತಂಡದ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಸಿರುವ ರಜನಿಕಾಂತ್, ಸಿನಿಮಾಗಾಗಿ ದುಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದರು. ಅಲ್ಲದೇ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಅವರು ಹೇಳಿದ್ದರು. ಸ್ವತಃ ತಾವೇ ಎಲ್ಲರಿಗೂ ಕೇಕ್ ತಿನ್ನಿಸಿದ್ದರು.

lokesh

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

4 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

8 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

8 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

8 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

8 hours ago