ಚಿತ್ರ ಮಂಜರಿ

ಮಲೇಷ್ಯಾದಲ್ಲೂ ದಾಖಲೆ ಬರೆದ ಜೈಲರ್

ರಜನಿಕಾಂತ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡಿತ್ತು. ಆರು ನೂರ ಕೋಟಿಗೂ ಹೆಚ್ಚು ಹಣವನ್ನು ಅದು ಬಾಕ್ಸ್ ಆಫೀಸಿನಿಂದ ಬಾಚಿಕೊಂಡಿತ್ತು. ಹಲವಾರು ದಾಖಲೆಗಳನ್ನು ಕೂಡ ಚಿತ್ರ ನಿರ್ಮಾಣ ಮಾಡಿತ್ತು. ಇದೀಗ ಮಲೇಷ್ಯಾದಲ್ಲಿ ಸಿನಿಮಾ ದಾಖಲೆಯೊಂದನ್ನು ಬರೆದಿದೆ.

ಜೈಲರ್ ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗಿದ್ದು, ಈವರೆಗೂ ರಿಲೀಸ್ ಆದ ಭಾರತೀಯ ಚಿತ್ರಗಳಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಸಿನಿಮಾ ಎನ್ನುವ ಹೆಗ್ಗಳಿಕೆಯೂ ಅದು ಪಾತ್ರವಾಗಿದೆ.

ಜೈಲರ್ ಸಿನಿಮಾ ಭರ್ಜರಿ ಗೆಲುವು ಸಾಧಿಸಿದೆ. ಬಾಕ್ಸ್ ಆಫೀಸಿನಲ್ಲಿ ಭಾರೀ ಕಲೆಕ್ಷನ್ ಮಾಡಿದೆ. ಹೀಗಾಗಿ ನಿರ್ಮಾಪಕ ಕಲಾನಿಧಿ ಮಾರನ್, ಭರ್ಜರಿ ಉಡುಗೊರೆಗಳನ್ನು ಚಿತ್ರತಂಡಕ್ಕೆ ನೀಡುತ್ತಿದ್ದಾರೆ. ಚಿತ್ರದ ನಾಯಕ, ನಿರ್ದೇಶಕ, ಸಂಗೀತ ನಿರ್ದೇಶಕರಿಗೆ ಈಗಾಗಲೇ ಕಾರುಗಳ ಉಡುಗೊರೆ ನೀಡಿರುವ ನಿರ್ಮಾಪಕರು, ಇದೀಗ ಚಿತ್ರತಂಡದಲ್ಲಿ ಕೆಲಸ ಮಾಡಿದ ಮುನ್ನೂರಕ್ಕೂ ಹೆಚ್ಚು ಜನರಿಗೆ ಬಂಗಾರದ ಉಡುಗೊರೆ ನೀಡಿದೆ. ಸಕ್ಸಸ್ ಪಾರ್ಟಿಯಲ್ಲಿ ಚಿನ್ನವನ್ನು ಗಿಫ್ಟ್ ಆಗಿ ನೀಡಿದ್ದಾರೆ.

ಈ ಹಿಂದೆ ನಿರ್ಮಾಪಕ ಕಲಾನಿಧಿ ಮಾರನ್, ನಟ ರಜನಿಕಾಂತ್ ಅವರಿಗೆ ದುಬಾರಿ ಉಡುಗೊರೆಯನ್ನೇ ನೀಡಿದ್ದರು. ಈ ಸಿನಿಮಾಗಾಗಿ ರಜನಿ 250 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಮೊದಲ ಕಂತಾಗಿ 150 ಕೋಟಿ ರೂಪಾಯಿ ಸಂದಾಯವಾಗಿತ್ತು. ಎರಡನೇ ಕಂತು ನೂರು ಕೋಟಿ ರೂಪಾಯಿ ಮತ್ತು ಬಿಎಂಡಬ್ಲೂ ಎಕ್ಸ್ 7 ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಲಾಗಿದೆ. ಈ ಕಾರಿನ ಬೆಲೆ 1.50 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಜೈಲರ್ ಸಿನಿಮಾ ಈಗಲೂ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡುತ್ತಿದೆ. ಹಲವು ವರ್ಷಗಳ ನಂತರ ರಜನಿ ಇಂಥದ್ದೊಂದು ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಈ ಖುಷಿಯನ್ನು ಅವರು ಚಿತ್ರತಂಡದ ಜೊತೆಗೆ ಹಂಚಿಕೊಂಡಿದ್ದರು.

ಜೈಲರ್ ಸಿನಿಮಾದ ಚಿತ್ರತಂಡದ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಸಿರುವ ರಜನಿಕಾಂತ್, ಸಿನಿಮಾಗಾಗಿ ದುಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದರು. ಅಲ್ಲದೇ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಅವರು ಹೇಳಿದ್ದರು. ಸ್ವತಃ ತಾವೇ ಎಲ್ಲರಿಗೂ ಕೇಕ್ ತಿನ್ನಿಸಿದ್ದರು.

lokesh

Recent Posts

ಹಾಸನ | ವಿದ್ಯುತ್‌ ಶಾಕ್‌ಗೆ ಕಂಬದಿಂದ ಬಿದ್ದ ಕಾರ್ಮಿಕರು: ಓರ್ವ ಸಾವು

ಹಾಸನ: ಕಂಬ ಏರಿ ವಿದ್ಯುತ್‌ ತಂತಿ ದುರಸ್ತಿ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನದ ಕಾಟೀಹಳ್ಳಿಯ ಟೀಚರ್ಸ್‌…

3 mins ago

ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ 45 ಚಿತ್ರದ ಟ್ರೇಲರ್‌ ರಿಲೀಸ್‌

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ…

14 mins ago

ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಇಡಿ ಚಾರ್ಜ್‌ಶೀಟ್‌ ಪರಿಗಣಿಸಲು ಕೋರ್ಟ್‌…

46 mins ago

ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಭೇಟಿ ನೀಡಿ ತಾಯಿಯ ದರ್ಶನ…

2 hours ago

ಕೊಡಗು: ಚಟ್ಟಳ್ಳಿ ಕಾಫಿ ತೋಟದಲ್ಲಿ ಹುಲಿ ಸಾವು

ಕೊಡಗು: ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಕೆಚ್ಚೆಟ್ಟರ ಎಸ್ಟೇಟ್‌ ಕಾಫಿ ತೋಟದಲ್ಲಿ ಹುಲಿಯೊಂದು ಸಾವನ್ನಪ್ಪಿದೆ. ಕಳೆದ ಕೆಲ ದಿನಗಳ ಹಿಂದೆ…

2 hours ago

ನಂಜನಗೂಡಿನಲ್ಲಿ ಮುಂದುವರಿದ ಕಳ್ಳರ ಹಾವಳಿ: ಶಿಕ್ಷಕ ದಂಪತಿ ಮನೆಯಲ್ಲಿ ಕಳ್ಳತನ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ…

2 hours ago