ರಜನಿಕಾಂತ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡಿತ್ತು. ಆರು ನೂರ ಕೋಟಿಗೂ ಹೆಚ್ಚು ಹಣವನ್ನು ಅದು ಬಾಕ್ಸ್ ಆಫೀಸಿನಿಂದ ಬಾಚಿಕೊಂಡಿತ್ತು. ಹಲವಾರು ದಾಖಲೆಗಳನ್ನು ಕೂಡ ಚಿತ್ರ ನಿರ್ಮಾಣ ಮಾಡಿತ್ತು. ಇದೀಗ ಮಲೇಷ್ಯಾದಲ್ಲಿ ಸಿನಿಮಾ ದಾಖಲೆಯೊಂದನ್ನು ಬರೆದಿದೆ.
ಜೈಲರ್ ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗಿದ್ದು, ಈವರೆಗೂ ರಿಲೀಸ್ ಆದ ಭಾರತೀಯ ಚಿತ್ರಗಳಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಸಿನಿಮಾ ಎನ್ನುವ ಹೆಗ್ಗಳಿಕೆಯೂ ಅದು ಪಾತ್ರವಾಗಿದೆ.
ಜೈಲರ್ ಸಿನಿಮಾ ಭರ್ಜರಿ ಗೆಲುವು ಸಾಧಿಸಿದೆ. ಬಾಕ್ಸ್ ಆಫೀಸಿನಲ್ಲಿ ಭಾರೀ ಕಲೆಕ್ಷನ್ ಮಾಡಿದೆ. ಹೀಗಾಗಿ ನಿರ್ಮಾಪಕ ಕಲಾನಿಧಿ ಮಾರನ್, ಭರ್ಜರಿ ಉಡುಗೊರೆಗಳನ್ನು ಚಿತ್ರತಂಡಕ್ಕೆ ನೀಡುತ್ತಿದ್ದಾರೆ. ಚಿತ್ರದ ನಾಯಕ, ನಿರ್ದೇಶಕ, ಸಂಗೀತ ನಿರ್ದೇಶಕರಿಗೆ ಈಗಾಗಲೇ ಕಾರುಗಳ ಉಡುಗೊರೆ ನೀಡಿರುವ ನಿರ್ಮಾಪಕರು, ಇದೀಗ ಚಿತ್ರತಂಡದಲ್ಲಿ ಕೆಲಸ ಮಾಡಿದ ಮುನ್ನೂರಕ್ಕೂ ಹೆಚ್ಚು ಜನರಿಗೆ ಬಂಗಾರದ ಉಡುಗೊರೆ ನೀಡಿದೆ. ಸಕ್ಸಸ್ ಪಾರ್ಟಿಯಲ್ಲಿ ಚಿನ್ನವನ್ನು ಗಿಫ್ಟ್ ಆಗಿ ನೀಡಿದ್ದಾರೆ.
ಈ ಹಿಂದೆ ನಿರ್ಮಾಪಕ ಕಲಾನಿಧಿ ಮಾರನ್, ನಟ ರಜನಿಕಾಂತ್ ಅವರಿಗೆ ದುಬಾರಿ ಉಡುಗೊರೆಯನ್ನೇ ನೀಡಿದ್ದರು. ಈ ಸಿನಿಮಾಗಾಗಿ ರಜನಿ 250 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಮೊದಲ ಕಂತಾಗಿ 150 ಕೋಟಿ ರೂಪಾಯಿ ಸಂದಾಯವಾಗಿತ್ತು. ಎರಡನೇ ಕಂತು ನೂರು ಕೋಟಿ ರೂಪಾಯಿ ಮತ್ತು ಬಿಎಂಡಬ್ಲೂ ಎಕ್ಸ್ 7 ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಲಾಗಿದೆ. ಈ ಕಾರಿನ ಬೆಲೆ 1.50 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.
ಜೈಲರ್ ಸಿನಿಮಾ ಈಗಲೂ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡುತ್ತಿದೆ. ಹಲವು ವರ್ಷಗಳ ನಂತರ ರಜನಿ ಇಂಥದ್ದೊಂದು ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಈ ಖುಷಿಯನ್ನು ಅವರು ಚಿತ್ರತಂಡದ ಜೊತೆಗೆ ಹಂಚಿಕೊಂಡಿದ್ದರು.
ಜೈಲರ್ ಸಿನಿಮಾದ ಚಿತ್ರತಂಡದ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಸಿರುವ ರಜನಿಕಾಂತ್, ಸಿನಿಮಾಗಾಗಿ ದುಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದರು. ಅಲ್ಲದೇ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಅವರು ಹೇಳಿದ್ದರು. ಸ್ವತಃ ತಾವೇ ಎಲ್ಲರಿಗೂ ಕೇಕ್ ತಿನ್ನಿಸಿದ್ದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…