ಚಿತ್ರ ಮಂಜರಿ

ಮಲೇಷ್ಯಾದಲ್ಲೂ ದಾಖಲೆ ಬರೆದ ಜೈಲರ್

ರಜನಿಕಾಂತ್ ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡಿತ್ತು. ಆರು ನೂರ ಕೋಟಿಗೂ ಹೆಚ್ಚು ಹಣವನ್ನು ಅದು ಬಾಕ್ಸ್ ಆಫೀಸಿನಿಂದ ಬಾಚಿಕೊಂಡಿತ್ತು. ಹಲವಾರು ದಾಖಲೆಗಳನ್ನು ಕೂಡ ಚಿತ್ರ ನಿರ್ಮಾಣ ಮಾಡಿತ್ತು. ಇದೀಗ ಮಲೇಷ್ಯಾದಲ್ಲಿ ಸಿನಿಮಾ ದಾಖಲೆಯೊಂದನ್ನು ಬರೆದಿದೆ.

ಜೈಲರ್ ಸಿನಿಮಾ ಮಲೇಷ್ಯಾದಲ್ಲಿ ರಿಲೀಸ್ ಆಗಿದ್ದು, ಈವರೆಗೂ ರಿಲೀಸ್ ಆದ ಭಾರತೀಯ ಚಿತ್ರಗಳಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರಗಳಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ಅತ್ಯಧಿಕ ಗಳಿಕೆ ಮಾಡಿದ ಭಾರತೀಯ ಸಿನಿಮಾ ಎನ್ನುವ ಹೆಗ್ಗಳಿಕೆಯೂ ಅದು ಪಾತ್ರವಾಗಿದೆ.

ಜೈಲರ್ ಸಿನಿಮಾ ಭರ್ಜರಿ ಗೆಲುವು ಸಾಧಿಸಿದೆ. ಬಾಕ್ಸ್ ಆಫೀಸಿನಲ್ಲಿ ಭಾರೀ ಕಲೆಕ್ಷನ್ ಮಾಡಿದೆ. ಹೀಗಾಗಿ ನಿರ್ಮಾಪಕ ಕಲಾನಿಧಿ ಮಾರನ್, ಭರ್ಜರಿ ಉಡುಗೊರೆಗಳನ್ನು ಚಿತ್ರತಂಡಕ್ಕೆ ನೀಡುತ್ತಿದ್ದಾರೆ. ಚಿತ್ರದ ನಾಯಕ, ನಿರ್ದೇಶಕ, ಸಂಗೀತ ನಿರ್ದೇಶಕರಿಗೆ ಈಗಾಗಲೇ ಕಾರುಗಳ ಉಡುಗೊರೆ ನೀಡಿರುವ ನಿರ್ಮಾಪಕರು, ಇದೀಗ ಚಿತ್ರತಂಡದಲ್ಲಿ ಕೆಲಸ ಮಾಡಿದ ಮುನ್ನೂರಕ್ಕೂ ಹೆಚ್ಚು ಜನರಿಗೆ ಬಂಗಾರದ ಉಡುಗೊರೆ ನೀಡಿದೆ. ಸಕ್ಸಸ್ ಪಾರ್ಟಿಯಲ್ಲಿ ಚಿನ್ನವನ್ನು ಗಿಫ್ಟ್ ಆಗಿ ನೀಡಿದ್ದಾರೆ.

ಈ ಹಿಂದೆ ನಿರ್ಮಾಪಕ ಕಲಾನಿಧಿ ಮಾರನ್, ನಟ ರಜನಿಕಾಂತ್ ಅವರಿಗೆ ದುಬಾರಿ ಉಡುಗೊರೆಯನ್ನೇ ನೀಡಿದ್ದರು. ಈ ಸಿನಿಮಾಗಾಗಿ ರಜನಿ 250 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದ್ದು, ಮೊದಲ ಕಂತಾಗಿ 150 ಕೋಟಿ ರೂಪಾಯಿ ಸಂದಾಯವಾಗಿತ್ತು. ಎರಡನೇ ಕಂತು ನೂರು ಕೋಟಿ ರೂಪಾಯಿ ಮತ್ತು ಬಿಎಂಡಬ್ಲೂ ಎಕ್ಸ್ 7 ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಲಾಗಿದೆ. ಈ ಕಾರಿನ ಬೆಲೆ 1.50 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಜೈಲರ್ ಸಿನಿಮಾ ಈಗಲೂ ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡುತ್ತಿದೆ. ಹಲವು ವರ್ಷಗಳ ನಂತರ ರಜನಿ ಇಂಥದ್ದೊಂದು ಗೆಲುವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗಾಗಿ ಸಹಜವಾಗಿಯೇ ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಈ ಖುಷಿಯನ್ನು ಅವರು ಚಿತ್ರತಂಡದ ಜೊತೆಗೆ ಹಂಚಿಕೊಂಡಿದ್ದರು.

ಜೈಲರ್ ಸಿನಿಮಾದ ಚಿತ್ರತಂಡದ ಜೊತೆಗೆ ಕೇಕ್ ಕತ್ತರಿಸಿ ಸಂಭ್ರಮಸಿರುವ ರಜನಿಕಾಂತ್, ಸಿನಿಮಾಗಾಗಿ ದುಡಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದರು. ಅಲ್ಲದೇ ಸಿನಿಮಾ ನೋಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಈ ಸಂದರ್ಭದಲ್ಲಿ ಅವರು ಹೇಳಿದ್ದರು. ಸ್ವತಃ ತಾವೇ ಎಲ್ಲರಿಗೂ ಕೇಕ್ ತಿನ್ನಿಸಿದ್ದರು.

lokesh

Recent Posts

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

4 mins ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

16 mins ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

2 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

2 hours ago

ಪಾರಂಪರಿಕ ಕಟ್ಟಡ ಸಂರಕ್ಷಿಸಿ.. ಪರಂಪರೆ ಉಳಿಸಿ..!

ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…

3 hours ago