ಚಿತ್ರ ಮಂಜರಿ

ಆರೋಗ್ಯದಲ್ಲಿ ಏರುಪೇರು : ಸುದ್ದಿ ವೈರಲ್ ಆದ ಬೆನ್ನಲ್ಲೇ ರಿಯಲ್ ಸ್ಟಾರ್ ಸ್ಪಷ್ಟನೆ

ನಾನು ಆರಾಮಾಗಿದ್ದೀನಿ, ಶೂಟಿಂಗ್‌ ಮುಂದುವರೆಸಿದ್ದೀವಿ; ವಿಡಿಯೋ ಮೂಲಕ ಉಪೇಂದ್ರ ಪ್ರತಿಕ್ರಿಯೆ

ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ರಿಯಲ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ರಿಯಲ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. ಚಿತ್ರೀಕರಣ ಸೆಟ್ ನಿಂದನೇ ಪ್ರತಿಕ್ರಿಯೆ ನೀಡಿರುವ ಉಪೇಂದ್ರ, ‘ನಾನು ಆರೋಗ್ಯವಾಗಿ ಇದ್ದೀನಿ, ಏನು ಆಗಿಲ್ಲ’ ಎಂದಿದ್ದಾರೆ. ಉಪೇಂದ್ರ ಸದ್ಯ ಯುಐ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಮೋಹನ್ ಬಿ ಕೆರೆ ಸ್ಟೂಡಿಯೋದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಅಲ್ಲಿಂದನೆ ಮಾತನಾಡಿದ ಉಪೇಂದ್ರ, ‘ ನಾವು ಮೋಹನ್ ಬಿ ಕೆರೆ ಸ್ಟೋಡಿಯೋದಲ್ಲಿ ಇದ್ದೀವಿ. ಆರಾಮಾಗಿ ಇದ್ದೀನಿ. ಇಲ್ಲಿ ಡಸ್ಟ್ ಜಾಸ್ತಿ ಇತ್ತು. ಹಾಗಾಗಿ ಸ್ವಲ್ಪ ಕಷ್ಟವಾಗಿತ್ತು. ಏನು ಆಗಿಲ್ಲ. ಶೂಟಿಂಗ್ ಮುಂದುವರೆಸಿದ್ದೀವಿ. ಎಲ್ಲರೂ ಇದ್ದಾರೆ ನೋಡಿ’ ಎಂದು ಹೇಳಿದ್ದಾರೆ.

ಅಂದಹಾಗೆ ಉಪೇಂದ್ರ ಯುಐ ಸಿನಿಮಾದ ಆಕ್ಷನ್ ದೃಶ್ಯಗಳ ಚಿತ್ರೀಕರಣ ಮಾಡುತ್ತಿದ್ದಾರೆ. ಥ್ರಿಲ್ಲರ್ ಮಂಜು ನಿರ್ದೇಶನದಲ್ಲಿ ಆಕ್ಷನ್ ದೃಶ್ಯದ ಚಿತ್ರೀಕರಣ ಮಾಡುತ್ತಿದ್ದಾರೆ. ಯುಐ ಸಿನಿಮಾ ಉಪೇಂದ್ರ ನಿರ್ದೇಶನ ಮಾಡಿ, ನಟಿಸುತ್ತಿರುವ ಸಿನಿಮಾ. ಈ ಸಿನಿಮಾಗೆ ನಿರ್ಮಾಪಕ ಕೆಪಿ ಶ್ರೀಕಾಂತ್ ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕಲಾವಿದರ ದೊಡ್ಡ ದಂಡೇ ಇದೆ. ನಿಧಿ ಸುಬ್ಬಯ್ಯ, ನಿರ್ದೇಶಕ ಇಂದ್ರಜಿತ್‌ ಲಂಕೇಶ್‌, ಸಾಮಾಜಿಕ ಹೋರಾಟಗಾರ ಪ್ರಶಾಂತ್‌ ಸಂಬರ್ಗಿ, ನಿರ್ಮಾಪಕ ಉಮೇಶ್‌ ಬಣಕಾರ್‌, ನಿರ್ದೇಶಕ ಓಂ ಸಾಯಿಪ್ರಕಾಶ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.

andolanait

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

7 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

7 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

8 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

9 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

13 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

13 hours ago