ಚಿತ್ರ ಮಂಜರಿ

ಆರೋಗ್ಯದಲ್ಲಿ ಏರುಪೇರು : ಸುದ್ದಿ ವೈರಲ್ ಆದ ಬೆನ್ನಲ್ಲೇ ರಿಯಲ್ ಸ್ಟಾರ್ ಸ್ಪಷ್ಟನೆ

ನಾನು ಆರಾಮಾಗಿದ್ದೀನಿ, ಶೂಟಿಂಗ್‌ ಮುಂದುವರೆಸಿದ್ದೀವಿ; ವಿಡಿಯೋ ಮೂಲಕ ಉಪೇಂದ್ರ ಪ್ರತಿಕ್ರಿಯೆ

ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ರಿಯಲ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆದ ಬೆನ್ನಲ್ಲೇ ಉಪೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಮೂಲಕ ರಿಯಲ್ ಸ್ಟಾರ್ ಸ್ಪಷ್ಟನೆ ನೀಡಿದ್ದಾರೆ. ಚಿತ್ರೀಕರಣ ಸೆಟ್ ನಿಂದನೇ ಪ್ರತಿಕ್ರಿಯೆ ನೀಡಿರುವ ಉಪೇಂದ್ರ, ‘ನಾನು ಆರೋಗ್ಯವಾಗಿ ಇದ್ದೀನಿ, ಏನು ಆಗಿಲ್ಲ’ ಎಂದಿದ್ದಾರೆ. ಉಪೇಂದ್ರ ಸದ್ಯ ಯುಐ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಮೋಹನ್ ಬಿ ಕೆರೆ ಸ್ಟೂಡಿಯೋದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಅಲ್ಲಿಂದನೆ ಮಾತನಾಡಿದ ಉಪೇಂದ್ರ, ‘ ನಾವು ಮೋಹನ್ ಬಿ ಕೆರೆ ಸ್ಟೋಡಿಯೋದಲ್ಲಿ ಇದ್ದೀವಿ. ಆರಾಮಾಗಿ ಇದ್ದೀನಿ. ಇಲ್ಲಿ ಡಸ್ಟ್ ಜಾಸ್ತಿ ಇತ್ತು. ಹಾಗಾಗಿ ಸ್ವಲ್ಪ ಕಷ್ಟವಾಗಿತ್ತು. ಏನು ಆಗಿಲ್ಲ. ಶೂಟಿಂಗ್ ಮುಂದುವರೆಸಿದ್ದೀವಿ. ಎಲ್ಲರೂ ಇದ್ದಾರೆ ನೋಡಿ’ ಎಂದು ಹೇಳಿದ್ದಾರೆ.

ಅಂದಹಾಗೆ ಉಪೇಂದ್ರ ಯುಐ ಸಿನಿಮಾದ ಆಕ್ಷನ್ ದೃಶ್ಯಗಳ ಚಿತ್ರೀಕರಣ ಮಾಡುತ್ತಿದ್ದಾರೆ. ಥ್ರಿಲ್ಲರ್ ಮಂಜು ನಿರ್ದೇಶನದಲ್ಲಿ ಆಕ್ಷನ್ ದೃಶ್ಯದ ಚಿತ್ರೀಕರಣ ಮಾಡುತ್ತಿದ್ದಾರೆ. ಯುಐ ಸಿನಿಮಾ ಉಪೇಂದ್ರ ನಿರ್ದೇಶನ ಮಾಡಿ, ನಟಿಸುತ್ತಿರುವ ಸಿನಿಮಾ. ಈ ಸಿನಿಮಾಗೆ ನಿರ್ಮಾಪಕ ಕೆಪಿ ಶ್ರೀಕಾಂತ್ ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕಲಾವಿದರ ದೊಡ್ಡ ದಂಡೇ ಇದೆ. ನಿಧಿ ಸುಬ್ಬಯ್ಯ, ನಿರ್ದೇಶಕ ಇಂದ್ರಜಿತ್‌ ಲಂಕೇಶ್‌, ಸಾಮಾಜಿಕ ಹೋರಾಟಗಾರ ಪ್ರಶಾಂತ್‌ ಸಂಬರ್ಗಿ, ನಿರ್ಮಾಪಕ ಉಮೇಶ್‌ ಬಣಕಾರ್‌, ನಿರ್ದೇಶಕ ಓಂ ಸಾಯಿಪ್ರಕಾಶ್‌ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.

andolanait

Recent Posts

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 mins ago

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

24 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

24 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

24 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

24 hours ago