ಚಿತ್ರ ಮಂಜರಿ

‘ಥ್ಯಾಂಕ್ ಗಾಡ್’ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈ ನಕಾರ

ಮುಂಬಯಿ: ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ರಾಕುಲ್ ಪ್ರೀತ್ ಅಭಿನಯದ ಹಿಂದಿ ಚಿತ್ರ ‘ಥ್ಯಾಂಕ್ ಗಾಡ್ʼ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.

ಸಿನಿಮಾ ಅ. 25ರಂದು ಬಿಡುಗಡೆಯಾಗಲಿದೆ ಎಂಬ ಕುರಿತು ಸೆ. 9ರಂದೇ ಘೋಷಿಸಿದ್ದರೂ ತುರ್ತು ಪರಿಹಾರ ಕೋರಿ ಅ. 18ರಂದು ಅರ್ಜಿ ಸಲ್ಲಿಸಿರುವುದನ್ನು ಗಮನಿಸಿದ ನ್ಯಾ. ಆರ್‌ ಐ ಚಾಗ್ಲಾ ಅವರಿದ್ದ ಏಕ ಸದಸ್ಯ ಪೀಠ, ಸಿನಿಮಾ ಈಗ ನಿರ್ಮಾಣೋತ್ತರ ಹಂತದಲ್ಲಿದೆ (ಪೋಸ್ಟ್‌ ಪ್ರೊಡಕ್ಷನ್‌) ಅದರ ಬಿಡುಗಡೆ ದಿನಾಂಕವನ್ನು ಸೆ. 9 ರಂದು ಘೋಷಿಸಲಾಗಿತ್ತು ಎಂಬುದು ಸಂಪೂರ್ಣ ತಿಳಿದೂ ಅರ್ಜಿದಾರರು ತುರ್ತು ಮಧ್ಯಂತರ ಪರಿಹಾರ ಕೋರಿದ್ದಾರೆ. ಹೀಗಾಗಿ ಈ ಹಂತದಲ್ಲಿ ಅರ್ಜಿ ಪರಿಗಣಿಸಲು ಸಾಧ್ಯವಿಲ್ಲ ಎಂದಿತು.

ಚಿತ್ರದ ಇಬ್ಬರು ನಿರ್ಮಾಪಕರ ನಡುವಿನ ಒಪ್ಪಂದದ ಬಿಕ್ಕಟ್ಟಿನಿಂದ ಉದ್ಭವಿಸಿದ ಮೊಕದ್ದಮೆಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು. ಡ್ಯಾನಿಷ್‌ ಭಾಷೆಯ ಸಿನಿಮಾವೊಂದನ್ನು ಆಧರಿಸಿದ ʼಥ್ಯಾಂಕ್‌ ಗಾಡ್‌ʼ ಚಿತ್ರ ನಿರ್ಮಾಣದ ವಿಶೇಷ ಹಕ್ಕುಗಳನ್ನು ಫಿರ್ಯಾದಿ ಅಜುರೆ ಎಂಟರ್‌ಟೈನ್‌ಮೆಂಟ್‌ ಪ್ರೈವೇಟ್‌ ಲಿಮಿಟೆಡ್‌ ಪಡೆದಿತ್ತು. ಅಜುರೆ ಏಕಮಾತ್ರ ಮತ್ತು ವಿಶೇಷ ರಿಮೇಕ್‌ ಹಕ್ಕು ಪಡೆಯುವ ಅನುಸಾರವಾಗಿ ಮಾರುತಿ ಎಂಟರ್‌ಪ್ರೈಸಸ್‌ ಚಿತ್ರವನ್ನು ಜಂಟಿಯಾಗಿ ನಿರ್ಮಿಸಲು ಅಜುರೆಯನ್ನು ಸಂಪರ್ಕಿಸಿತ್ತು. ಆದರೆ ಹೆಸರಾಂತ ಆಡಿಯೊ ಸಂಸ್ಥೆ ಟಿ- ಸೀರಿಸ್‌ ಮತ್ತು ಮಾರುತಿ ತಾನು ಮಾಡಿಕೊಂಡಿದ್ದ ಒಪ್ಪಂದವನ್ನು ಉಲ್ಲಂಘಿಸಿದ್ದು ತನ್ನನ್ನು ಒಳಗೊಳ್ಳದೆ ಚಿತ್ರದ ಟ್ರೇಲರ್‌ಗಳನ್ನು ನಿರ್ಮಿಸಿವೆ ಎಂದು ಅಜುರೆ ನ್ಯಾಯಾಲಯದ ಮೆಟ್ಟಿಲೇರಿತ್ತು. ವಿಚಾರಣೆ ವೇಳೆ ತುರ್ತು ಪರಿಹಾರ ನೀಡಲು ನಿರಾಕರಿಸಿದ್ದರೂ ಅರ್ಜಿಗೆ ಪ್ರತಿಕ್ರಿಯಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ಪ್ರಕರಣವನ್ನು ನ್ಯಾಯಾಲಯ ನ. 22ಕ್ಕೆ ಮುಂದೂಡಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago