ಚಿತ್ರ ಮಂಜರಿ

‘ಥ್ಯಾಂಕ್ ಗಾಡ್’ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈ ನಕಾರ

ಮುಂಬಯಿ: ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ರಾಕುಲ್ ಪ್ರೀತ್ ಅಭಿನಯದ ಹಿಂದಿ ಚಿತ್ರ ‘ಥ್ಯಾಂಕ್ ಗಾಡ್ʼ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.

ಸಿನಿಮಾ ಅ. 25ರಂದು ಬಿಡುಗಡೆಯಾಗಲಿದೆ ಎಂಬ ಕುರಿತು ಸೆ. 9ರಂದೇ ಘೋಷಿಸಿದ್ದರೂ ತುರ್ತು ಪರಿಹಾರ ಕೋರಿ ಅ. 18ರಂದು ಅರ್ಜಿ ಸಲ್ಲಿಸಿರುವುದನ್ನು ಗಮನಿಸಿದ ನ್ಯಾ. ಆರ್‌ ಐ ಚಾಗ್ಲಾ ಅವರಿದ್ದ ಏಕ ಸದಸ್ಯ ಪೀಠ, ಸಿನಿಮಾ ಈಗ ನಿರ್ಮಾಣೋತ್ತರ ಹಂತದಲ್ಲಿದೆ (ಪೋಸ್ಟ್‌ ಪ್ರೊಡಕ್ಷನ್‌) ಅದರ ಬಿಡುಗಡೆ ದಿನಾಂಕವನ್ನು ಸೆ. 9 ರಂದು ಘೋಷಿಸಲಾಗಿತ್ತು ಎಂಬುದು ಸಂಪೂರ್ಣ ತಿಳಿದೂ ಅರ್ಜಿದಾರರು ತುರ್ತು ಮಧ್ಯಂತರ ಪರಿಹಾರ ಕೋರಿದ್ದಾರೆ. ಹೀಗಾಗಿ ಈ ಹಂತದಲ್ಲಿ ಅರ್ಜಿ ಪರಿಗಣಿಸಲು ಸಾಧ್ಯವಿಲ್ಲ ಎಂದಿತು.

ಚಿತ್ರದ ಇಬ್ಬರು ನಿರ್ಮಾಪಕರ ನಡುವಿನ ಒಪ್ಪಂದದ ಬಿಕ್ಕಟ್ಟಿನಿಂದ ಉದ್ಭವಿಸಿದ ಮೊಕದ್ದಮೆಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು. ಡ್ಯಾನಿಷ್‌ ಭಾಷೆಯ ಸಿನಿಮಾವೊಂದನ್ನು ಆಧರಿಸಿದ ʼಥ್ಯಾಂಕ್‌ ಗಾಡ್‌ʼ ಚಿತ್ರ ನಿರ್ಮಾಣದ ವಿಶೇಷ ಹಕ್ಕುಗಳನ್ನು ಫಿರ್ಯಾದಿ ಅಜುರೆ ಎಂಟರ್‌ಟೈನ್‌ಮೆಂಟ್‌ ಪ್ರೈವೇಟ್‌ ಲಿಮಿಟೆಡ್‌ ಪಡೆದಿತ್ತು. ಅಜುರೆ ಏಕಮಾತ್ರ ಮತ್ತು ವಿಶೇಷ ರಿಮೇಕ್‌ ಹಕ್ಕು ಪಡೆಯುವ ಅನುಸಾರವಾಗಿ ಮಾರುತಿ ಎಂಟರ್‌ಪ್ರೈಸಸ್‌ ಚಿತ್ರವನ್ನು ಜಂಟಿಯಾಗಿ ನಿರ್ಮಿಸಲು ಅಜುರೆಯನ್ನು ಸಂಪರ್ಕಿಸಿತ್ತು. ಆದರೆ ಹೆಸರಾಂತ ಆಡಿಯೊ ಸಂಸ್ಥೆ ಟಿ- ಸೀರಿಸ್‌ ಮತ್ತು ಮಾರುತಿ ತಾನು ಮಾಡಿಕೊಂಡಿದ್ದ ಒಪ್ಪಂದವನ್ನು ಉಲ್ಲಂಘಿಸಿದ್ದು ತನ್ನನ್ನು ಒಳಗೊಳ್ಳದೆ ಚಿತ್ರದ ಟ್ರೇಲರ್‌ಗಳನ್ನು ನಿರ್ಮಿಸಿವೆ ಎಂದು ಅಜುರೆ ನ್ಯಾಯಾಲಯದ ಮೆಟ್ಟಿಲೇರಿತ್ತು. ವಿಚಾರಣೆ ವೇಳೆ ತುರ್ತು ಪರಿಹಾರ ನೀಡಲು ನಿರಾಕರಿಸಿದ್ದರೂ ಅರ್ಜಿಗೆ ಪ್ರತಿಕ್ರಿಯಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ಪ್ರಕರಣವನ್ನು ನ್ಯಾಯಾಲಯ ನ. 22ಕ್ಕೆ ಮುಂದೂಡಿದೆ.

andolanait

Recent Posts

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

1 min ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

1 hour ago

ಫೆ.23ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಲೋಕಾರ್ಪಣೆ : ಪ್ರಧಾನಿ ಮೋದಿ ಭಾಗಿ

ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…

1 hour ago

ಸ್ವಜಾತಿ ಪಕ್ಷಪಾತ ಬೇಡ ; ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಬಳ್ಳಾರಿ ಬ್ಯಾನರ್‌ ಘರ್ಷಣೆ | ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಎಫ್‌ಐಆರ್‌

ಬಳ್ಳಾರಿ : ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…

4 hours ago

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

7 hours ago