ಮುಂಬಯಿ: ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ರಾಕುಲ್ ಪ್ರೀತ್ ಅಭಿನಯದ ಹಿಂದಿ ಚಿತ್ರ ‘ಥ್ಯಾಂಕ್ ಗಾಡ್ʼ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.
ಸಿನಿಮಾ ಅ. 25ರಂದು ಬಿಡುಗಡೆಯಾಗಲಿದೆ ಎಂಬ ಕುರಿತು ಸೆ. 9ರಂದೇ ಘೋಷಿಸಿದ್ದರೂ ತುರ್ತು ಪರಿಹಾರ ಕೋರಿ ಅ. 18ರಂದು ಅರ್ಜಿ ಸಲ್ಲಿಸಿರುವುದನ್ನು ಗಮನಿಸಿದ ನ್ಯಾ. ಆರ್ ಐ ಚಾಗ್ಲಾ ಅವರಿದ್ದ ಏಕ ಸದಸ್ಯ ಪೀಠ, ಸಿನಿಮಾ ಈಗ ನಿರ್ಮಾಣೋತ್ತರ ಹಂತದಲ್ಲಿದೆ (ಪೋಸ್ಟ್ ಪ್ರೊಡಕ್ಷನ್) ಅದರ ಬಿಡುಗಡೆ ದಿನಾಂಕವನ್ನು ಸೆ. 9 ರಂದು ಘೋಷಿಸಲಾಗಿತ್ತು ಎಂಬುದು ಸಂಪೂರ್ಣ ತಿಳಿದೂ ಅರ್ಜಿದಾರರು ತುರ್ತು ಮಧ್ಯಂತರ ಪರಿಹಾರ ಕೋರಿದ್ದಾರೆ. ಹೀಗಾಗಿ ಈ ಹಂತದಲ್ಲಿ ಅರ್ಜಿ ಪರಿಗಣಿಸಲು ಸಾಧ್ಯವಿಲ್ಲ ಎಂದಿತು.
ಚಿತ್ರದ ಇಬ್ಬರು ನಿರ್ಮಾಪಕರ ನಡುವಿನ ಒಪ್ಪಂದದ ಬಿಕ್ಕಟ್ಟಿನಿಂದ ಉದ್ಭವಿಸಿದ ಮೊಕದ್ದಮೆಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು. ಡ್ಯಾನಿಷ್ ಭಾಷೆಯ ಸಿನಿಮಾವೊಂದನ್ನು ಆಧರಿಸಿದ ʼಥ್ಯಾಂಕ್ ಗಾಡ್ʼ ಚಿತ್ರ ನಿರ್ಮಾಣದ ವಿಶೇಷ ಹಕ್ಕುಗಳನ್ನು ಫಿರ್ಯಾದಿ ಅಜುರೆ ಎಂಟರ್ಟೈನ್ಮೆಂಟ್ ಪ್ರೈವೇಟ್ ಲಿಮಿಟೆಡ್ ಪಡೆದಿತ್ತು. ಅಜುರೆ ಏಕಮಾತ್ರ ಮತ್ತು ವಿಶೇಷ ರಿಮೇಕ್ ಹಕ್ಕು ಪಡೆಯುವ ಅನುಸಾರವಾಗಿ ಮಾರುತಿ ಎಂಟರ್ಪ್ರೈಸಸ್ ಚಿತ್ರವನ್ನು ಜಂಟಿಯಾಗಿ ನಿರ್ಮಿಸಲು ಅಜುರೆಯನ್ನು ಸಂಪರ್ಕಿಸಿತ್ತು. ಆದರೆ ಹೆಸರಾಂತ ಆಡಿಯೊ ಸಂಸ್ಥೆ ಟಿ- ಸೀರಿಸ್ ಮತ್ತು ಮಾರುತಿ ತಾನು ಮಾಡಿಕೊಂಡಿದ್ದ ಒಪ್ಪಂದವನ್ನು ಉಲ್ಲಂಘಿಸಿದ್ದು ತನ್ನನ್ನು ಒಳಗೊಳ್ಳದೆ ಚಿತ್ರದ ಟ್ರೇಲರ್ಗಳನ್ನು ನಿರ್ಮಿಸಿವೆ ಎಂದು ಅಜುರೆ ನ್ಯಾಯಾಲಯದ ಮೆಟ್ಟಿಲೇರಿತ್ತು. ವಿಚಾರಣೆ ವೇಳೆ ತುರ್ತು ಪರಿಹಾರ ನೀಡಲು ನಿರಾಕರಿಸಿದ್ದರೂ ಅರ್ಜಿಗೆ ಪ್ರತಿಕ್ರಿಯಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ಪ್ರಕರಣವನ್ನು ನ್ಯಾಯಾಲಯ ನ. 22ಕ್ಕೆ ಮುಂದೂಡಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…