ಚಿತ್ರ ಮಂಜರಿ

‘ಥ್ಯಾಂಕ್ ಗಾಡ್’ ಚಲನಚಿತ್ರ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈ ನಕಾರ

ಮುಂಬಯಿ: ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ಹಾಗೂ ರಾಕುಲ್ ಪ್ರೀತ್ ಅಭಿನಯದ ಹಿಂದಿ ಚಿತ್ರ ‘ಥ್ಯಾಂಕ್ ಗಾಡ್ʼ ಬಿಡುಗಡೆಗೆ ತಡೆ ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.

ಸಿನಿಮಾ ಅ. 25ರಂದು ಬಿಡುಗಡೆಯಾಗಲಿದೆ ಎಂಬ ಕುರಿತು ಸೆ. 9ರಂದೇ ಘೋಷಿಸಿದ್ದರೂ ತುರ್ತು ಪರಿಹಾರ ಕೋರಿ ಅ. 18ರಂದು ಅರ್ಜಿ ಸಲ್ಲಿಸಿರುವುದನ್ನು ಗಮನಿಸಿದ ನ್ಯಾ. ಆರ್‌ ಐ ಚಾಗ್ಲಾ ಅವರಿದ್ದ ಏಕ ಸದಸ್ಯ ಪೀಠ, ಸಿನಿಮಾ ಈಗ ನಿರ್ಮಾಣೋತ್ತರ ಹಂತದಲ್ಲಿದೆ (ಪೋಸ್ಟ್‌ ಪ್ರೊಡಕ್ಷನ್‌) ಅದರ ಬಿಡುಗಡೆ ದಿನಾಂಕವನ್ನು ಸೆ. 9 ರಂದು ಘೋಷಿಸಲಾಗಿತ್ತು ಎಂಬುದು ಸಂಪೂರ್ಣ ತಿಳಿದೂ ಅರ್ಜಿದಾರರು ತುರ್ತು ಮಧ್ಯಂತರ ಪರಿಹಾರ ಕೋರಿದ್ದಾರೆ. ಹೀಗಾಗಿ ಈ ಹಂತದಲ್ಲಿ ಅರ್ಜಿ ಪರಿಗಣಿಸಲು ಸಾಧ್ಯವಿಲ್ಲ ಎಂದಿತು.

ಚಿತ್ರದ ಇಬ್ಬರು ನಿರ್ಮಾಪಕರ ನಡುವಿನ ಒಪ್ಪಂದದ ಬಿಕ್ಕಟ್ಟಿನಿಂದ ಉದ್ಭವಿಸಿದ ಮೊಕದ್ದಮೆಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಿತು. ಡ್ಯಾನಿಷ್‌ ಭಾಷೆಯ ಸಿನಿಮಾವೊಂದನ್ನು ಆಧರಿಸಿದ ʼಥ್ಯಾಂಕ್‌ ಗಾಡ್‌ʼ ಚಿತ್ರ ನಿರ್ಮಾಣದ ವಿಶೇಷ ಹಕ್ಕುಗಳನ್ನು ಫಿರ್ಯಾದಿ ಅಜುರೆ ಎಂಟರ್‌ಟೈನ್‌ಮೆಂಟ್‌ ಪ್ರೈವೇಟ್‌ ಲಿಮಿಟೆಡ್‌ ಪಡೆದಿತ್ತು. ಅಜುರೆ ಏಕಮಾತ್ರ ಮತ್ತು ವಿಶೇಷ ರಿಮೇಕ್‌ ಹಕ್ಕು ಪಡೆಯುವ ಅನುಸಾರವಾಗಿ ಮಾರುತಿ ಎಂಟರ್‌ಪ್ರೈಸಸ್‌ ಚಿತ್ರವನ್ನು ಜಂಟಿಯಾಗಿ ನಿರ್ಮಿಸಲು ಅಜುರೆಯನ್ನು ಸಂಪರ್ಕಿಸಿತ್ತು. ಆದರೆ ಹೆಸರಾಂತ ಆಡಿಯೊ ಸಂಸ್ಥೆ ಟಿ- ಸೀರಿಸ್‌ ಮತ್ತು ಮಾರುತಿ ತಾನು ಮಾಡಿಕೊಂಡಿದ್ದ ಒಪ್ಪಂದವನ್ನು ಉಲ್ಲಂಘಿಸಿದ್ದು ತನ್ನನ್ನು ಒಳಗೊಳ್ಳದೆ ಚಿತ್ರದ ಟ್ರೇಲರ್‌ಗಳನ್ನು ನಿರ್ಮಿಸಿವೆ ಎಂದು ಅಜುರೆ ನ್ಯಾಯಾಲಯದ ಮೆಟ್ಟಿಲೇರಿತ್ತು. ವಿಚಾರಣೆ ವೇಳೆ ತುರ್ತು ಪರಿಹಾರ ನೀಡಲು ನಿರಾಕರಿಸಿದ್ದರೂ ಅರ್ಜಿಗೆ ಪ್ರತಿಕ್ರಿಯಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿ ಪ್ರಕರಣವನ್ನು ನ್ಯಾಯಾಲಯ ನ. 22ಕ್ಕೆ ಮುಂದೂಡಿದೆ.

andolanait

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

4 mins ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

10 mins ago

ಪಿ.ಜಿ.ಪಾಳ್ಯ ಸಫಾರಿ ಕೇಂದ್ರಕ್ಕೆ ಪ್ರವಾಸಿಗರ ಲಗ್ಗೆ

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…

14 mins ago

ಈ ಹಳೇ ಕಟ್ಟಡ ಕುಸಿದರೆ ವ್ಯಾಪಾರಿಗಳಿಗೆ ಸಂಚಕಾರ!

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ…

18 mins ago

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

23 mins ago

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

14 hours ago