ಚಿತ್ರ ಮಂಜರಿ

ಹಾಲಿವುಡ್‌ ನಟಿ ರಾಕ್ವೆಲ್​ ಇನ್ನಿಲ್ಲ

ವಾಷಿಂಗ್ಟನ್​: 1960ರ ದಶಕದಲ್ಲಿ ಮಾದಕ ತಾರೆ ಎಂದೇ ಹೆಸರು ಗಳಿಸಿದ್ದ ರಾಕ್ವೆಲ್​ ವೆಲ್ಚ್​​ 82ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ಇಹಲೋಕ ತ್ಯಜಿಸಿದ್ದಾರೆ. ಬುಧವಾರ (ಫೆ. 15)ರಂದು ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ ಎಂದು ಅಮೆರಿಕ ಟ್ಯಾಬ್ಲೋಯ್ಡ್​ ನ್ಯೂಸ್​ ಅರ್ಗನೈಸೆಷನ್​ ಟಿಎಂಜೆಡ್​ ವರದಿ ಮಾಡಿದೆ.ಹಾಲಿವುಡ್​ನ ಉನ್ಮಾದದ ಬೆಡಗಿ: 1966 ಫ್ಯಾಂಟಸ್ಟಿಕ್​ ವೊಯೇಜ್​ ಮತ್ತು ಒನ್​ ಮಿಲಿಯನ್​ ಇಯರ್​ B. C ಚಿತ್ರದ ಮೂಲಕ ರಾಕ್ವೆಲ್​ ಹೆಸರು ಗಳಿಸಿದ್ದರು. B. C ಚಿತ್ರದಲ್ಲಿ ಒಂದೆರಡು ನಿಮಿಷದ ಪಾತ್ರದಲ್ಲಿ ಮಿಂಚಿದ್ದರೂ ತಮ್ಮ ಉಡುಪಿನಿಂದಾಗಿ ಪ್ರೇಕ್ಷಕರ ಮನದಲ್ಲಿ ಅಚ್ಚೊತ್ತಿದ್ದರು. ಕೊಂಚ ಹೆಚ್ಚು ಎನ್ನುವ ಮಾದಕತೆ ಜೊತೆ ಬಿಕಿನಿಯಲ್ಲಿ ಮಿಂಚಿದ್ದ ಅವರು, ಉದ್ಯಮದಲ್ಲಿ ಸೆಕ್ಸ್​​ ಸಿಂಬಲ್​ ಆಗಿ ರೂಪುಗೊಂಡರು. ಇದಾದ ಬಳಿಕ ವೆಲ್ವ್ ಸ್ಟಾರ್​ಡಮ್​ ಕೂಡ ಹೆಚ್ಚಿತ್ತು. 1960 ಮತ್ತು 1970ರ ದಶಕದಲ್ಲಿ ಅತ್ಯಂತ ಬೇಡಿಕೆಯ ನಟಿಯಾಗಿ ಅವರು ರೂಪುಗೊಂಡರು. ​
ಇನ್ನು ತಮ್ಮ ಸಿನಿ ವೃತ್ತಿ ಜೀವನದಲ್ಲಿ ಅನೇಕ ಪ್ರಶಸ್ತಿಗಳನ್ನು ಕೂಡ ಅವರು ಬಾಚಿಕೊಂಡಿದ್ದಾರೆ. 1974ರಲ್ಲಿ ನಟಿಸಿದ್ದ ಮ್ಯೂಸಿಯಲ್​ ಕಾಮಿಡಿ ಚಿತ್ರ ದಿ ತ್ರಿ ಮುಸ್ಕಿಟೀರ್ಸ್​ ಸಿನಿಮಾಗಾಗಿ ಗೋಲ್ಡನ್​ ಗ್ಲೋಬ್​ನಲ್ಲಿ ಉತ್ತಮ ನಟಿ ಪ್ರಶಸ್ತಿಯನ್ನು ಪಡೆದರು. ಇನ್ನು ನಟಿಯ ಸಾವಿನ ಕುರಿತು ತಿಳಿಸಿರುವ ​ಅಮೆರಿಕ ಮೂಲದ ಸುದ್ದಿ ಸಂಸ್ಥೆ ಫಾಕ್ಸ್​ ನ್ಯೂಸ್​, ವೆಲ್ಚ್​ ಸಿನಿ ಉದ್ಯಮದಲ್ಲಿ ಉನ್ಮಾದ ನಟಿಯಾಗಿ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೇ, ಟಿವಿ ಮತ್ತು ನಾಟಕ ಮಾಧ್ಯಮಗಳಲ್ಲೂ ಗುರುತಿಸಿಕೊಂಡಿದ್ದರು.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago