ಚಿತ್ರ ಮಂಜರಿ

ಗೃಹ ಸಚಿವ ಜಿ.ಪರಮೇಶ್ವರ್, ರಮ್ಯಾ ‘ರಾಜು ಜೇಮ್ಸ್ ಬಾಂಡ್’ ಜೊತೆ

ನಟಿ ರಮ್ಯಾ ಎರಡು ವರ್ಷಗಳ ಹಿಂದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರ ನಿರ್ಮಿಸಿದ್ದರು. ತಾವೇ ನಿರ್ಮಿಸಿದ ಚಿತ್ರವಾದರೂ, ಅದರ ಕಾರ್ಯಕ್ರಮದಲ್ಲಿ ಎಲ್ಲೂ ಅವರು ಕಾಣಿಸಿಕೊಂಡಿರಲಿಲ್ಲ. ಇದೀಗ ಅವರು ಬಹು ವರ್ಷಗಳ ನಂತರ ಬೇರೊಂದು ಸಿನಿಮಾ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಾರ ಬಿಡುಗಡೆಯಾಗುತ್ತಿರುವ ಗುರು ನಂದನ್ ನಾಯಕನಾಗಿ ಅಭಿನಯಿಸಿರುವ ‘ರಾಜು ಜೇಮ್ಸ್ ಬಾಂಡ್’ ಚಿತ್ರದ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ಜೊತೆಗೆ ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು.

ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾ ಣದ, ದೀಪಕ್ ಮಧು ವನಹಳ್ಳಿ ನಿರ್ದೇಶನದ ‘ರಾಜು ಜೇಮ್ಸ್ ಬಾಂಡ್’ ಚಿತ್ರದ ಈ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮುಖ್ಯ ಮಂತ್ರಿಗಳ ಆಪ್ತ ಕಾರ್ಯದರ್ಶಿ ವೆಂಕಟೇಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ನಿರ್ಮಾಪಕರಾದ ರಮೇಶ್ ರೆಡ್ಡಿ, ನಾಯಕಿ ತಪಸ್ವಿನಿ ಶರ್ಮ ಸೇರಿದಂತೆ ಅನೇಕರು ಈ ಸಮಾರಂಭದಲ್ಲಿ ಹಾಜರಿದ್ದು ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

‘ರಾಜು ಜೇಮ್ಸ್ ಬಾಂಡ್’ ಚಿತ್ರದ ತುಣುಕು ಹಾಗೂ ಹಾಡುಗಳನ್ನು ನೋಡಿದರೆ, ಚಿತ್ರ ಯಶಸ್ವಿಯಾಗುವ ಎಲ್ಲ ಲಕ್ಷಣಗಳು ಇವೆ. ಚಿತ್ರ ಯಶಸ್ಸು ಕಾಣಲಿ’ ಎಂದು ಗೃಹ ಸಚಿವರು ಶುಭ ಕೋರಿದರು. ‘ಟ್ರೇಲರ್ ಹಾಗೂ ಹಾಡುಗಳು ತುಂಬಾ ಚೆನ್ನಾಗಿವೆ.

ಛಾಯಾ ಗ್ರಹಣವಂತೂ ಸೂಪರ್. ಅಷ್ಟೇ ಚೆನ್ನಾಗಿ ನಾಯಕ ಹಾಗೂ ನಾಯಕಿ ಅಭಿನಯಿಸಿದ್ದಾರೆ. ಪ್ರೇಮಿಗಳ ದಿನದಂದು ಬಿಡುಗಡೆ ಯಾಗುತ್ತಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ರಮ್ಯ ಹಾರೈಸಿದರು.

‘ರಾಜು ಜೇಮ್ಸ್ ಬಾಂಡ್’ ಚಿತ್ರದಲ್ಲಿ ಗುರುನಂದನ್, ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ನಟಿಸಿದ್ದು, ಮನೋಹರ್ ಜೋಶಿ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಇದೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.…

7 mins ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…

30 mins ago

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳಕರ್‌

ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…

40 mins ago

ತೀವ್ರಗೊಂಡ ಪೂರ್ವಮುಂಗಾರು : ಏ.1ರವರೆಗೆ ರಾಜ್ಯದಲ್ಲಿ ಆಲಿಕಲ್ಲು ಮಳೆ

ಮೈಸೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು…

48 mins ago

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ…

1 hour ago

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

2 hours ago