ಚಿತ್ರ ಮಂಜರಿ

ತುಮಕೂರು ವಿವಿಯಿಂದ ಟಿ.ಎಸ್ ನಾಗಾಭರಣಗೆ ಗೌರವ ಡಾಕ್ಟರೇಟ್

ಕನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ದೇಶಕ ನಾಗಾಭರಣ ಅವರು ತುಮಕೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.

ನಿರ್ದೇಶಕ ನಾಗಾಭರಣ ಹಾಗೂ ಸಮಾಜ ಸೇವಕ ಆರ್‌.ಎಲ್ ರಮೇಶ್‌ಬಾಬು ಅವರು ತುಮಕೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಇವರಿಬ್ಬರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಕನ್ನಡ ಸಿನಿಮಾ, ರಂಗಭೂಮಿಗೆ ವಿಶಿಷ್ಟ ಕೊಡುಗೆ ನೀಡಿರುವ ಟಿ. ಎಸ್. ನಾಗಾಭರಣ ಅವರು 35ಕ್ಕಿಂತ ಹೆಚ್ಚು ಸಿನಿಮಾಗಳ ನಿರ್ದೇಶನ ಮಾಡಿದ್ದಾರೆ.

ಸಂತ ಶಿಶುನಾಳ ಶರೀಫ, ಚಿನ್ನಾರಿ ಮುತ್ತ, ನಾಗಮಂಡಲ, ಸಿಂಗಾರೆವ್ವ, ಕಲ್ಲರಳಿ ಹೂವಾಗಿ, ಅಲ್ಲಮ ಮುಂತಾದ ಚಿತ್ರಗಳನ್ನು ನಿರ್ದೇಶಿಸುವ ಮೂಲಕ ನಾಗಾಭರಣ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ.

ಹಾಗೆಯೇ ಗೌರವ ಡಾಕ್ಟರೇಟ್‌ಗೆ ಭಾಜನರಾಗುತ್ತಿರುವ ತುಮಕೂರು ಮೂಲದ ರಮೇಶ್‌ಬಾಬು ಸಮಾಜ ಸೇವಕರು ಹಾಗೂ ಕೈಗಾರಿಕೋದ್ಯಮಿಗಳು. ತಮ್ಮ ಕಠಿಣ ಪರಿಶ್ರಮ ಮತ್ತು ಸಂಕಲ್ಪದಿಂದ ಭಗವಾನ್ ರೈಸ್ ಮಿಲ್, ಭಗವತಿ ಭಗವಾನ್ ರೈಸ್ ಮಿಲ್ ಮತ್ತು ರಾಜಲಕ್ಷಿ ಆಗ್ರೊ ಫುಡ್ಸ್ ಹೆಮ್ಮೆಯ ಮಾಲೀಕರಾದರು. ಈ ಮೂಲಕ 150ಕ್ಕೂ ಹೆಚ್ಚು ಕುಟುಂಬಗಳಿಗೆ ಉದ್ಯೋಗವನ್ನು ಕಲ್ಪಿಸಿದ್ದಾರೆ.

ತುಮಕೂರು ವಿವಿ ವತಿಯಿಂದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲು ನೇಮಿಸಿದ್ದ ಸಮಿತಿಯ ಶಿಫಾರಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಆಗಸ್ಟ್ 7ರಂದು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್‌ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ. ವೆಂಕಟೇಶ್ವರಲು ತಿಳಿಸಿದ್ದಾರೆ.

lokesh

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

8 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

8 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

10 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

11 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

11 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

11 hours ago