ಚಿತ್ರ ಮಂಜರಿ

ತುಮಕೂರು ವಿವಿಯಿಂದ ಟಿ.ಎಸ್ ನಾಗಾಭರಣಗೆ ಗೌರವ ಡಾಕ್ಟರೇಟ್

ಕನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ದೇಶಕ ನಾಗಾಭರಣ ಅವರು ತುಮಕೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.

ನಿರ್ದೇಶಕ ನಾಗಾಭರಣ ಹಾಗೂ ಸಮಾಜ ಸೇವಕ ಆರ್‌.ಎಲ್ ರಮೇಶ್‌ಬಾಬು ಅವರು ತುಮಕೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಇವರಿಬ್ಬರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಕನ್ನಡ ಸಿನಿಮಾ, ರಂಗಭೂಮಿಗೆ ವಿಶಿಷ್ಟ ಕೊಡುಗೆ ನೀಡಿರುವ ಟಿ. ಎಸ್. ನಾಗಾಭರಣ ಅವರು 35ಕ್ಕಿಂತ ಹೆಚ್ಚು ಸಿನಿಮಾಗಳ ನಿರ್ದೇಶನ ಮಾಡಿದ್ದಾರೆ.

ಸಂತ ಶಿಶುನಾಳ ಶರೀಫ, ಚಿನ್ನಾರಿ ಮುತ್ತ, ನಾಗಮಂಡಲ, ಸಿಂಗಾರೆವ್ವ, ಕಲ್ಲರಳಿ ಹೂವಾಗಿ, ಅಲ್ಲಮ ಮುಂತಾದ ಚಿತ್ರಗಳನ್ನು ನಿರ್ದೇಶಿಸುವ ಮೂಲಕ ನಾಗಾಭರಣ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ.

ಹಾಗೆಯೇ ಗೌರವ ಡಾಕ್ಟರೇಟ್‌ಗೆ ಭಾಜನರಾಗುತ್ತಿರುವ ತುಮಕೂರು ಮೂಲದ ರಮೇಶ್‌ಬಾಬು ಸಮಾಜ ಸೇವಕರು ಹಾಗೂ ಕೈಗಾರಿಕೋದ್ಯಮಿಗಳು. ತಮ್ಮ ಕಠಿಣ ಪರಿಶ್ರಮ ಮತ್ತು ಸಂಕಲ್ಪದಿಂದ ಭಗವಾನ್ ರೈಸ್ ಮಿಲ್, ಭಗವತಿ ಭಗವಾನ್ ರೈಸ್ ಮಿಲ್ ಮತ್ತು ರಾಜಲಕ್ಷಿ ಆಗ್ರೊ ಫುಡ್ಸ್ ಹೆಮ್ಮೆಯ ಮಾಲೀಕರಾದರು. ಈ ಮೂಲಕ 150ಕ್ಕೂ ಹೆಚ್ಚು ಕುಟುಂಬಗಳಿಗೆ ಉದ್ಯೋಗವನ್ನು ಕಲ್ಪಿಸಿದ್ದಾರೆ.

ತುಮಕೂರು ವಿವಿ ವತಿಯಿಂದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲು ನೇಮಿಸಿದ್ದ ಸಮಿತಿಯ ಶಿಫಾರಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಆಗಸ್ಟ್ 7ರಂದು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್‌ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ. ವೆಂಕಟೇಶ್ವರಲು ತಿಳಿಸಿದ್ದಾರೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago