ಚಿತ್ರ ಮಂಜರಿ

ತುಮಕೂರು ವಿವಿಯಿಂದ ಟಿ.ಎಸ್ ನಾಗಾಭರಣಗೆ ಗೌರವ ಡಾಕ್ಟರೇಟ್

ಕನ್ನಡ ಚಿತ್ರರಂಗದ ಹೆಸರಾಂತ ನಟ, ನಿರ್ದೇಶಕ ನಾಗಾಭರಣ ಅವರು ತುಮಕೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.

ನಿರ್ದೇಶಕ ನಾಗಾಭರಣ ಹಾಗೂ ಸಮಾಜ ಸೇವಕ ಆರ್‌.ಎಲ್ ರಮೇಶ್‌ಬಾಬು ಅವರು ತುಮಕೂರು ವಿವಿಯ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಆಗಸ್ಟ್ 7ರಂದು ನಡೆಯಲಿರುವ ವಿವಿ ಘಟಿಕೋತ್ಸವದಲ್ಲಿ ಇವರಿಬ್ಬರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಕನ್ನಡ ಸಿನಿಮಾ, ರಂಗಭೂಮಿಗೆ ವಿಶಿಷ್ಟ ಕೊಡುಗೆ ನೀಡಿರುವ ಟಿ. ಎಸ್. ನಾಗಾಭರಣ ಅವರು 35ಕ್ಕಿಂತ ಹೆಚ್ಚು ಸಿನಿಮಾಗಳ ನಿರ್ದೇಶನ ಮಾಡಿದ್ದಾರೆ.

ಸಂತ ಶಿಶುನಾಳ ಶರೀಫ, ಚಿನ್ನಾರಿ ಮುತ್ತ, ನಾಗಮಂಡಲ, ಸಿಂಗಾರೆವ್ವ, ಕಲ್ಲರಳಿ ಹೂವಾಗಿ, ಅಲ್ಲಮ ಮುಂತಾದ ಚಿತ್ರಗಳನ್ನು ನಿರ್ದೇಶಿಸುವ ಮೂಲಕ ನಾಗಾಭರಣ ಅವರು ಪ್ರೇಕ್ಷಕರ ಮನಗೆದ್ದಿದ್ದಾರೆ.

ಹಾಗೆಯೇ ಗೌರವ ಡಾಕ್ಟರೇಟ್‌ಗೆ ಭಾಜನರಾಗುತ್ತಿರುವ ತುಮಕೂರು ಮೂಲದ ರಮೇಶ್‌ಬಾಬು ಸಮಾಜ ಸೇವಕರು ಹಾಗೂ ಕೈಗಾರಿಕೋದ್ಯಮಿಗಳು. ತಮ್ಮ ಕಠಿಣ ಪರಿಶ್ರಮ ಮತ್ತು ಸಂಕಲ್ಪದಿಂದ ಭಗವಾನ್ ರೈಸ್ ಮಿಲ್, ಭಗವತಿ ಭಗವಾನ್ ರೈಸ್ ಮಿಲ್ ಮತ್ತು ರಾಜಲಕ್ಷಿ ಆಗ್ರೊ ಫುಡ್ಸ್ ಹೆಮ್ಮೆಯ ಮಾಲೀಕರಾದರು. ಈ ಮೂಲಕ 150ಕ್ಕೂ ಹೆಚ್ಚು ಕುಟುಂಬಗಳಿಗೆ ಉದ್ಯೋಗವನ್ನು ಕಲ್ಪಿಸಿದ್ದಾರೆ.

ತುಮಕೂರು ವಿವಿ ವತಿಯಿಂದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲು ನೇಮಿಸಿದ್ದ ಸಮಿತಿಯ ಶಿಫಾರಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಆಗಸ್ಟ್ 7ರಂದು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್‌ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ. ವೆಂಕಟೇಶ್ವರಲು ತಿಳಿಸಿದ್ದಾರೆ.

lokesh

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago