ನಟಿ ರಮ್ಯಾ ಅವರು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಲೀಗಲ್ ನೋಟೀಸ್ ಕಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್ ಖುಷಿ ಆಗಿದ್ದರು. ಆದರೆ ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಸುದ್ದಿ ಮತ್ತಿತ್ತರ ಕಂಟೆಂಟ್ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್ ಮಾಡಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟೀಸ್ನಲ್ಲಿ ಒತ್ತಾಯಿಸಿದ್ದಾರೆ. ಇದು ಈಗ ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸುವ ಸಾಧ್ಯತೆ ಇದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜುಲೈ 21ರಂದು ಬಿಡುಗಡೆ ಮಾಡಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಈಗ ಕೊನೇ ಕ್ಷಣದಲ್ಲಿ ರಮ್ಯಾ ಅವರಿಂದ ಲೀಗಲ್ ನೋಟೀಸ್ ಬಂದಿರುವುದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಈ ಮೊದಲು ರಮ್ಯಾ ಅವರು ಈ ಸಿನಿಮಾದ ಪ್ರೋಮೋ ಶೂಟ್ನಲ್ಲಿ ಭಾಗಿ ಆಗಿದ್ದರು. ಆದರೆ ಈಗ ಅವರು ಲೀಗಲ್ ನೋಟೀಸ್ ಕಳಿಸಿರುವುದು ಅಚ್ಚರಿ ಮೂಡಿಸಿದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಇದರಲ್ಲಿ ರಮ್ಯಾ, ರಿಷಬ್ ಶೆಟ್ಟಿ, ದಿಗಂತ್, ಪವನ್ ಕುಮಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ಆದರೆ ಈ ಟ್ರೇಲರ್ ಅನ್ನು ಯೂಟ್ಯೂಬ್ ಮುಂತಾದ ಕಡೆಗಳಿಂದ ತೆಗೆದು ಹಾಕಬೇಕು ಎಂದು ಕೋರ್ಟ್ ಆದೇಶಿಸಿದೆ ಎಂದು ಈ ಲೀಗಲ್ ನೋಟೀಸ್ನಲ್ಲಿ ತಿಳಿಸಲಾಗಿದೆ.
ನಿತಿನ್ ಕೃಷ್ಣಮೂರ್ತಿ ಅವರು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಅರವಿಂದ್ ಎಸ್. ಕಶ್ಯಪ್ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಪರಂವಾ ಪಿಕ್ಚರ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…