ಚಿತ್ರ ಮಂಜರಿ

ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರತಂಡಕ್ಕೆ ಲೀಗಲ್​ ನೋಟೀಸ್ ನೀಡಿದ ಮೋಹಕ ತಾರೆ ರಮ್ಯ

ನಟಿ ರಮ್ಯಾ ಅವರು ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಲೀಗಲ್​ ನೋಟೀಸ್​ ಕಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್​ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್​ ಖುಷಿ ಆಗಿದ್ದರು. ಆದರೆ ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಸುದ್ದಿ ಮತ್ತಿತ್ತರ ಕಂಟೆಂಟ್​ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್​ ಮಾಡಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟೀಸ್​ನಲ್ಲಿ ಒತ್ತಾಯಿಸಿದ್ದಾರೆ. ಇದು ಈಗ ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸುವ ಸಾಧ್ಯತೆ ಇದೆ.

ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜುಲೈ 21ರಂದು ಬಿಡುಗಡೆ ಮಾಡಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಈಗ ಕೊನೇ ಕ್ಷಣದಲ್ಲಿ ರಮ್ಯಾ ಅವರಿಂದ ಲೀಗಲ್​ ನೋಟೀಸ್​ ಬಂದಿರುವುದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಈ ಮೊದಲು ರಮ್ಯಾ ಅವರು ಈ ಸಿನಿಮಾದ ಪ್ರೋಮೋ ಶೂಟ್​ನಲ್ಲಿ ಭಾಗಿ ಆಗಿದ್ದರು. ಆದರೆ ಈಗ ಅವರು ಲೀಗಲ್​ ನೋಟೀಸ್​ ಕಳಿಸಿರುವುದು ಅಚ್ಚರಿ ಮೂಡಿಸಿದೆ.

ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್​ ಗಮನ ಸೆಳೆದಿದೆ. ಇದರಲ್ಲಿ ರಮ್ಯಾ, ರಿಷಬ್​ ಶೆಟ್ಟಿ, ದಿಗಂತ್​, ಪವನ್​ ಕುಮಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ಆದರೆ ಈ ಟ್ರೇಲರ್​ ಅನ್ನು ಯೂಟ್ಯೂಬ್​ ಮುಂತಾದ ಕಡೆಗಳಿಂದ ತೆಗೆದು ಹಾಕಬೇಕು ಎಂದು ಕೋರ್ಟ್​ ಆದೇಶಿಸಿದೆ ಎಂದು ಈ ಲೀಗಲ್​ ನೋಟೀಸ್​ನಲ್ಲಿ ತಿಳಿಸಲಾಗಿದೆ.

ನಿತಿನ್​ ಕೃಷ್ಣಮೂರ್ತಿ ಅವರು ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿದ್ದಾರೆ. ಅರವಿಂದ್​ ಎಸ್​. ಕಶ್ಯಪ್​ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಅವರು ಪರಂವಾ ಪಿಕ್ಚರ್ಸ್​ ಮೂಲಕ ಬಿಡುಗಡೆ ಮಾಡಲಿದ್ದಾರೆ.

lokesh

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

4 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

4 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

4 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

5 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

5 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

5 hours ago