ನಟಿ ರಮ್ಯಾ ಅವರು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಲೀಗಲ್ ನೋಟೀಸ್ ಕಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್ ಖುಷಿ ಆಗಿದ್ದರು. ಆದರೆ ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಸುದ್ದಿ ಮತ್ತಿತ್ತರ ಕಂಟೆಂಟ್ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್ ಮಾಡಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟೀಸ್ನಲ್ಲಿ ಒತ್ತಾಯಿಸಿದ್ದಾರೆ. ಇದು ಈಗ ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸುವ ಸಾಧ್ಯತೆ ಇದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜುಲೈ 21ರಂದು ಬಿಡುಗಡೆ ಮಾಡಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಈಗ ಕೊನೇ ಕ್ಷಣದಲ್ಲಿ ರಮ್ಯಾ ಅವರಿಂದ ಲೀಗಲ್ ನೋಟೀಸ್ ಬಂದಿರುವುದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಈ ಮೊದಲು ರಮ್ಯಾ ಅವರು ಈ ಸಿನಿಮಾದ ಪ್ರೋಮೋ ಶೂಟ್ನಲ್ಲಿ ಭಾಗಿ ಆಗಿದ್ದರು. ಆದರೆ ಈಗ ಅವರು ಲೀಗಲ್ ನೋಟೀಸ್ ಕಳಿಸಿರುವುದು ಅಚ್ಚರಿ ಮೂಡಿಸಿದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಇದರಲ್ಲಿ ರಮ್ಯಾ, ರಿಷಬ್ ಶೆಟ್ಟಿ, ದಿಗಂತ್, ಪವನ್ ಕುಮಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ಆದರೆ ಈ ಟ್ರೇಲರ್ ಅನ್ನು ಯೂಟ್ಯೂಬ್ ಮುಂತಾದ ಕಡೆಗಳಿಂದ ತೆಗೆದು ಹಾಕಬೇಕು ಎಂದು ಕೋರ್ಟ್ ಆದೇಶಿಸಿದೆ ಎಂದು ಈ ಲೀಗಲ್ ನೋಟೀಸ್ನಲ್ಲಿ ತಿಳಿಸಲಾಗಿದೆ.
ನಿತಿನ್ ಕೃಷ್ಣಮೂರ್ತಿ ಅವರು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಅರವಿಂದ್ ಎಸ್. ಕಶ್ಯಪ್ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಪರಂವಾ ಪಿಕ್ಚರ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…