ನಟಿ ರಮ್ಯಾ ಅವರು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಲೀಗಲ್ ನೋಟೀಸ್ ಕಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್ ಖುಷಿ ಆಗಿದ್ದರು. ಆದರೆ ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಸುದ್ದಿ ಮತ್ತಿತ್ತರ ಕಂಟೆಂಟ್ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್ ಮಾಡಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟೀಸ್ನಲ್ಲಿ ಒತ್ತಾಯಿಸಿದ್ದಾರೆ. ಇದು ಈಗ ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸುವ ಸಾಧ್ಯತೆ ಇದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜುಲೈ 21ರಂದು ಬಿಡುಗಡೆ ಮಾಡಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಈಗ ಕೊನೇ ಕ್ಷಣದಲ್ಲಿ ರಮ್ಯಾ ಅವರಿಂದ ಲೀಗಲ್ ನೋಟೀಸ್ ಬಂದಿರುವುದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಈ ಮೊದಲು ರಮ್ಯಾ ಅವರು ಈ ಸಿನಿಮಾದ ಪ್ರೋಮೋ ಶೂಟ್ನಲ್ಲಿ ಭಾಗಿ ಆಗಿದ್ದರು. ಆದರೆ ಈಗ ಅವರು ಲೀಗಲ್ ನೋಟೀಸ್ ಕಳಿಸಿರುವುದು ಅಚ್ಚರಿ ಮೂಡಿಸಿದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಇದರಲ್ಲಿ ರಮ್ಯಾ, ರಿಷಬ್ ಶೆಟ್ಟಿ, ದಿಗಂತ್, ಪವನ್ ಕುಮಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ಆದರೆ ಈ ಟ್ರೇಲರ್ ಅನ್ನು ಯೂಟ್ಯೂಬ್ ಮುಂತಾದ ಕಡೆಗಳಿಂದ ತೆಗೆದು ಹಾಕಬೇಕು ಎಂದು ಕೋರ್ಟ್ ಆದೇಶಿಸಿದೆ ಎಂದು ಈ ಲೀಗಲ್ ನೋಟೀಸ್ನಲ್ಲಿ ತಿಳಿಸಲಾಗಿದೆ.
ನಿತಿನ್ ಕೃಷ್ಣಮೂರ್ತಿ ಅವರು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಅರವಿಂದ್ ಎಸ್. ಕಶ್ಯಪ್ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಪರಂವಾ ಪಿಕ್ಚರ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.
ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್…
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…