ನಟಿ ರಮ್ಯಾ ಅವರು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಲೀಗಲ್ ನೋಟೀಸ್ ಕಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್ ಖುಷಿ ಆಗಿದ್ದರು. ಆದರೆ ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಸುದ್ದಿ ಮತ್ತಿತ್ತರ ಕಂಟೆಂಟ್ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್ ಮಾಡಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟೀಸ್ನಲ್ಲಿ ಒತ್ತಾಯಿಸಿದ್ದಾರೆ. ಇದು ಈಗ ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸುವ ಸಾಧ್ಯತೆ ಇದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜುಲೈ 21ರಂದು ಬಿಡುಗಡೆ ಮಾಡಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಈಗ ಕೊನೇ ಕ್ಷಣದಲ್ಲಿ ರಮ್ಯಾ ಅವರಿಂದ ಲೀಗಲ್ ನೋಟೀಸ್ ಬಂದಿರುವುದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಈ ಮೊದಲು ರಮ್ಯಾ ಅವರು ಈ ಸಿನಿಮಾದ ಪ್ರೋಮೋ ಶೂಟ್ನಲ್ಲಿ ಭಾಗಿ ಆಗಿದ್ದರು. ಆದರೆ ಈಗ ಅವರು ಲೀಗಲ್ ನೋಟೀಸ್ ಕಳಿಸಿರುವುದು ಅಚ್ಚರಿ ಮೂಡಿಸಿದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಇದರಲ್ಲಿ ರಮ್ಯಾ, ರಿಷಬ್ ಶೆಟ್ಟಿ, ದಿಗಂತ್, ಪವನ್ ಕುಮಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ಆದರೆ ಈ ಟ್ರೇಲರ್ ಅನ್ನು ಯೂಟ್ಯೂಬ್ ಮುಂತಾದ ಕಡೆಗಳಿಂದ ತೆಗೆದು ಹಾಕಬೇಕು ಎಂದು ಕೋರ್ಟ್ ಆದೇಶಿಸಿದೆ ಎಂದು ಈ ಲೀಗಲ್ ನೋಟೀಸ್ನಲ್ಲಿ ತಿಳಿಸಲಾಗಿದೆ.
ನಿತಿನ್ ಕೃಷ್ಣಮೂರ್ತಿ ಅವರು ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ನೀಡಿದ್ದಾರೆ. ಅರವಿಂದ್ ಎಸ್. ಕಶ್ಯಪ್ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಪರಂವಾ ಪಿಕ್ಚರ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…