ಚಿತ್ರ ಮಂಜರಿ

ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರತಂಡಕ್ಕೆ ಲೀಗಲ್​ ನೋಟೀಸ್ ನೀಡಿದ ಮೋಹಕ ತಾರೆ ರಮ್ಯ

ನಟಿ ರಮ್ಯಾ ಅವರು ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಲೀಗಲ್​ ನೋಟೀಸ್​ ಕಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್​ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್​ ಖುಷಿ ಆಗಿದ್ದರು. ಆದರೆ ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಸುದ್ದಿ ಮತ್ತಿತ್ತರ ಕಂಟೆಂಟ್​ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್​ ಮಾಡಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟೀಸ್​ನಲ್ಲಿ ಒತ್ತಾಯಿಸಿದ್ದಾರೆ. ಇದು ಈಗ ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸುವ ಸಾಧ್ಯತೆ ಇದೆ.

ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜುಲೈ 21ರಂದು ಬಿಡುಗಡೆ ಮಾಡಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಈಗ ಕೊನೇ ಕ್ಷಣದಲ್ಲಿ ರಮ್ಯಾ ಅವರಿಂದ ಲೀಗಲ್​ ನೋಟೀಸ್​ ಬಂದಿರುವುದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಈ ಮೊದಲು ರಮ್ಯಾ ಅವರು ಈ ಸಿನಿಮಾದ ಪ್ರೋಮೋ ಶೂಟ್​ನಲ್ಲಿ ಭಾಗಿ ಆಗಿದ್ದರು. ಆದರೆ ಈಗ ಅವರು ಲೀಗಲ್​ ನೋಟೀಸ್​ ಕಳಿಸಿರುವುದು ಅಚ್ಚರಿ ಮೂಡಿಸಿದೆ.

ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟ್ರೇಲರ್​ ಗಮನ ಸೆಳೆದಿದೆ. ಇದರಲ್ಲಿ ರಮ್ಯಾ, ರಿಷಬ್​ ಶೆಟ್ಟಿ, ದಿಗಂತ್​, ಪವನ್​ ಕುಮಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ಆದರೆ ಈ ಟ್ರೇಲರ್​ ಅನ್ನು ಯೂಟ್ಯೂಬ್​ ಮುಂತಾದ ಕಡೆಗಳಿಂದ ತೆಗೆದು ಹಾಕಬೇಕು ಎಂದು ಕೋರ್ಟ್​ ಆದೇಶಿಸಿದೆ ಎಂದು ಈ ಲೀಗಲ್​ ನೋಟೀಸ್​ನಲ್ಲಿ ತಿಳಿಸಲಾಗಿದೆ.

ನಿತಿನ್​ ಕೃಷ್ಣಮೂರ್ತಿ ಅವರು ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿದ್ದಾರೆ. ಅರವಿಂದ್​ ಎಸ್​. ಕಶ್ಯಪ್​ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಅವರು ಪರಂವಾ ಪಿಕ್ಚರ್ಸ್​ ಮೂಲಕ ಬಿಡುಗಡೆ ಮಾಡಲಿದ್ದಾರೆ.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago