ಚಿತ್ರ ಮಂಜರಿ

ತೆಲುಗಿಗೆ ಡಬ್ ಆದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ

ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಎಂದಾಗ ಅದನ್ನು ಪರಭಾಷೆಗೆ ಡಬ್ ಮಾಡುವ ಕೆಲಸ ಆಗುತ್ತದೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಬಳಿಕ ತೆಲುಗು, ತಮಿಳು ಹಾಗೂ ಹಿಂದಿಗೆ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. ಈಗ ಹಾಸ್ಟೆಲ್ ಹುಡುಗರ ಸರದಿ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತೆಲುಗಿಗೆ ಡಬ್ ಆಗಿದೆ. ಈ ಚಿತ್ರಕ್ಕೆ ತೆಲುಗಿನಲ್ಲಿ ಬಾಯ್ಸ್ ಹಾಸ್ಟೆಲ್ ಎಂದು ಶೀರ್ಷಿಕೆ ಇಡಲಾಗಿದೆ.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಕನ್ನಡದಲ್ಲಿ ಜುಲೈ 21ರಂದು ರಿಲೀಸ್ ಆಯಿತು. ಈ ಚಿತ್ರ ಕನ್ನಡ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ ಪಡೆಯಿತು. ಹಾಸ್ಟೆಲ್ ಹುಡುಗರ ತಮಾಷೆ ಅನೇಕರಿಗೆ ಇಷ್ಟವಾಯಿತು. ರಕ್ಷಿತ್ ಶೆಟ್ಟಿ ಒಡೆತನದ ಪರಂವ ಸ್ಟುಡಿಯೋಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡಿದೆ. ಈ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ಅವರು ನಿರ್ದೇಶನ ಮಾಡಿದ್ದಾರೆ.

ತೆಲುಗಿನಲ್ಲಿ ಈ ಚಿತ್ರ ಆಗಸ್ಟ್ 26ರಂದು ರಿಲೀಸ್ ಆಗಲಿದೆ. ಬಾಯ್ಸ್ ಹಾಸ್ಟೆಲ್ ಎನ್ನುವ ಶೀರ್ಷಿಕೆ ಫೈನಲ್ ಆಗಿದ್ದು, ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಾಯ್ ಬಿಸ್ಕೆಟ್ ಫಿಲ್ಮ್ಸ್ ಹಾಗೂ ಅಕ್ಕಿನೇನಿ ನಾಗಾರ್ಜುನ ಅವರ ಅನುಪಮಾ ಸ್ಟುಡಿಯೋ ಈ ಚಿತ್ರವನ್ನು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಹಂಚಿಕೆ ಮಾಡುತ್ತಿದೆ. ಅಲ್ಲಿ ಈ ಚಿತ್ರಕ್ಕೆ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಈ ಚಿತ್ರದಲ್ಲಿ ನಟಿಸಿದ ಬಹುತೇಕ ಎಲ್ಲರೂ ಹೊಸ ಪ್ರತಿಭೆಗಳೇ. ಹಲವರಿಗೆ ರಂಗಭೂಮಿ ಹಿನ್ನೆಲೆ ಇದೆ. ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಸಿಕ್ಕಿದೆ. ವರುಣ್ ಗೌಡ, ಪ್ರಜ್ವಲ್ ಬಿ.ಪಿ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಎಸ್. ಕಶ್ಯಪ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ರಮ್ಯಾ ಅತಿಥಿ ಪಾತ್ರ ಮಾಡಿ ಗಮನ ಸೆಳೆದರು. ಸದ್ಯ ಹೈದರಾಬಾದ್​ನಲ್ಲಿ ಕನ್ನಡ ವರ್ಷನ್ ಪ್ರದರ್ಶನ ಕಾಣುತ್ತಿತ್ತು ಎನ್ನಲಾಗಿದೆ. ಈಗ ತೆಲುಗು ವರ್ಷನ್ ರಿಲೀಸ್ ಆಗುತ್ತಿರುವುದರಿಂದ ಕನ್ನಡ ಅವತರಣಿಕೆಯನ್ನು ತೆಗೆಯಲಾಗಿದೆ.

lokesh

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

4 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

4 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

5 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

5 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

5 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

6 hours ago