ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಎಂದಾಗ ಅದನ್ನು ಪರಭಾಷೆಗೆ ಡಬ್ ಮಾಡುವ ಕೆಲಸ ಆಗುತ್ತದೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಬಳಿಕ ತೆಲುಗು, ತಮಿಳು ಹಾಗೂ ಹಿಂದಿಗೆ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. ಈಗ ಹಾಸ್ಟೆಲ್ ಹುಡುಗರ ಸರದಿ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತೆಲುಗಿಗೆ ಡಬ್ ಆಗಿದೆ. ಈ ಚಿತ್ರಕ್ಕೆ ತೆಲುಗಿನಲ್ಲಿ ಬಾಯ್ಸ್ ಹಾಸ್ಟೆಲ್ ಎಂದು ಶೀರ್ಷಿಕೆ ಇಡಲಾಗಿದೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಕನ್ನಡದಲ್ಲಿ ಜುಲೈ 21ರಂದು ರಿಲೀಸ್ ಆಯಿತು. ಈ ಚಿತ್ರ ಕನ್ನಡ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ ಪಡೆಯಿತು. ಹಾಸ್ಟೆಲ್ ಹುಡುಗರ ತಮಾಷೆ ಅನೇಕರಿಗೆ ಇಷ್ಟವಾಯಿತು. ರಕ್ಷಿತ್ ಶೆಟ್ಟಿ ಒಡೆತನದ ಪರಂವ ಸ್ಟುಡಿಯೋಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡಿದೆ. ಈ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ಅವರು ನಿರ್ದೇಶನ ಮಾಡಿದ್ದಾರೆ.
ತೆಲುಗಿನಲ್ಲಿ ಈ ಚಿತ್ರ ಆಗಸ್ಟ್ 26ರಂದು ರಿಲೀಸ್ ಆಗಲಿದೆ. ಬಾಯ್ಸ್ ಹಾಸ್ಟೆಲ್ ಎನ್ನುವ ಶೀರ್ಷಿಕೆ ಫೈನಲ್ ಆಗಿದ್ದು, ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಾಯ್ ಬಿಸ್ಕೆಟ್ ಫಿಲ್ಮ್ಸ್ ಹಾಗೂ ಅಕ್ಕಿನೇನಿ ನಾಗಾರ್ಜುನ ಅವರ ಅನುಪಮಾ ಸ್ಟುಡಿಯೋ ಈ ಚಿತ್ರವನ್ನು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಹಂಚಿಕೆ ಮಾಡುತ್ತಿದೆ. ಅಲ್ಲಿ ಈ ಚಿತ್ರಕ್ಕೆ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಈ ಚಿತ್ರದಲ್ಲಿ ನಟಿಸಿದ ಬಹುತೇಕ ಎಲ್ಲರೂ ಹೊಸ ಪ್ರತಿಭೆಗಳೇ. ಹಲವರಿಗೆ ರಂಗಭೂಮಿ ಹಿನ್ನೆಲೆ ಇದೆ. ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಸಿಕ್ಕಿದೆ. ವರುಣ್ ಗೌಡ, ಪ್ರಜ್ವಲ್ ಬಿ.ಪಿ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಎಸ್. ಕಶ್ಯಪ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ರಮ್ಯಾ ಅತಿಥಿ ಪಾತ್ರ ಮಾಡಿ ಗಮನ ಸೆಳೆದರು. ಸದ್ಯ ಹೈದರಾಬಾದ್ನಲ್ಲಿ ಕನ್ನಡ ವರ್ಷನ್ ಪ್ರದರ್ಶನ ಕಾಣುತ್ತಿತ್ತು ಎನ್ನಲಾಗಿದೆ. ಈಗ ತೆಲುಗು ವರ್ಷನ್ ರಿಲೀಸ್ ಆಗುತ್ತಿರುವುದರಿಂದ ಕನ್ನಡ ಅವತರಣಿಕೆಯನ್ನು ತೆಗೆಯಲಾಗಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…