ಚಿತ್ರ ಮಂಜರಿ

ತೆಲುಗಿಗೆ ಡಬ್ ಆದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ

ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಎಂದಾಗ ಅದನ್ನು ಪರಭಾಷೆಗೆ ಡಬ್ ಮಾಡುವ ಕೆಲಸ ಆಗುತ್ತದೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಬಳಿಕ ತೆಲುಗು, ತಮಿಳು ಹಾಗೂ ಹಿಂದಿಗೆ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. ಈಗ ಹಾಸ್ಟೆಲ್ ಹುಡುಗರ ಸರದಿ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತೆಲುಗಿಗೆ ಡಬ್ ಆಗಿದೆ. ಈ ಚಿತ್ರಕ್ಕೆ ತೆಲುಗಿನಲ್ಲಿ ಬಾಯ್ಸ್ ಹಾಸ್ಟೆಲ್ ಎಂದು ಶೀರ್ಷಿಕೆ ಇಡಲಾಗಿದೆ.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಕನ್ನಡದಲ್ಲಿ ಜುಲೈ 21ರಂದು ರಿಲೀಸ್ ಆಯಿತು. ಈ ಚಿತ್ರ ಕನ್ನಡ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ ಪಡೆಯಿತು. ಹಾಸ್ಟೆಲ್ ಹುಡುಗರ ತಮಾಷೆ ಅನೇಕರಿಗೆ ಇಷ್ಟವಾಯಿತು. ರಕ್ಷಿತ್ ಶೆಟ್ಟಿ ಒಡೆತನದ ಪರಂವ ಸ್ಟುಡಿಯೋಸ್ ಈ ಚಿತ್ರವನ್ನು ಪ್ರೆಸೆಂಟ್ ಮಾಡಿದೆ. ಈ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ಅವರು ನಿರ್ದೇಶನ ಮಾಡಿದ್ದಾರೆ.

ತೆಲುಗಿನಲ್ಲಿ ಈ ಚಿತ್ರ ಆಗಸ್ಟ್ 26ರಂದು ರಿಲೀಸ್ ಆಗಲಿದೆ. ಬಾಯ್ಸ್ ಹಾಸ್ಟೆಲ್ ಎನ್ನುವ ಶೀರ್ಷಿಕೆ ಫೈನಲ್ ಆಗಿದ್ದು, ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಾಯ್ ಬಿಸ್ಕೆಟ್ ಫಿಲ್ಮ್ಸ್ ಹಾಗೂ ಅಕ್ಕಿನೇನಿ ನಾಗಾರ್ಜುನ ಅವರ ಅನುಪಮಾ ಸ್ಟುಡಿಯೋ ಈ ಚಿತ್ರವನ್ನು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಹಂಚಿಕೆ ಮಾಡುತ್ತಿದೆ. ಅಲ್ಲಿ ಈ ಚಿತ್ರಕ್ಕೆ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಈ ಚಿತ್ರದಲ್ಲಿ ನಟಿಸಿದ ಬಹುತೇಕ ಎಲ್ಲರೂ ಹೊಸ ಪ್ರತಿಭೆಗಳೇ. ಹಲವರಿಗೆ ರಂಗಭೂಮಿ ಹಿನ್ನೆಲೆ ಇದೆ. ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಸಿಕ್ಕಿದೆ. ವರುಣ್ ಗೌಡ, ಪ್ರಜ್ವಲ್ ಬಿ.ಪಿ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಎಸ್. ಕಶ್ಯಪ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ರಮ್ಯಾ ಅತಿಥಿ ಪಾತ್ರ ಮಾಡಿ ಗಮನ ಸೆಳೆದರು. ಸದ್ಯ ಹೈದರಾಬಾದ್​ನಲ್ಲಿ ಕನ್ನಡ ವರ್ಷನ್ ಪ್ರದರ್ಶನ ಕಾಣುತ್ತಿತ್ತು ಎನ್ನಲಾಗಿದೆ. ಈಗ ತೆಲುಗು ವರ್ಷನ್ ರಿಲೀಸ್ ಆಗುತ್ತಿರುವುದರಿಂದ ಕನ್ನಡ ಅವತರಣಿಕೆಯನ್ನು ತೆಗೆಯಲಾಗಿದೆ.

lokesh

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

6 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

10 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago