ಇತ್ತೀಚೆಗೆ ಬಿಡುಗಡೆಯಾದ ರಜಿನಿಕಾಂತ್ ಅಭಿನಯದ ತಮಿಳು ಚಿತ್ರ ಜೈಲರ್, ಮೊದಲ ವಾರದಲ್ಲಿ ಬಾಕ್ಸ್ ಆಫೀಸ್ನಲ್ಲಿ 375.40 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎಂದು ಚಿತ್ರತಂಡ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದೆ.
ನೆಲ್ಸನ್ ದಿಲೀಪ್ಕುಮಾರ್ ಬರೆದು, ನಿರ್ದೇಶಿಸಿದ ಈ ಚಿತ್ರಕ್ಕೆ ಸನ್ ಪಿಕ್ಚರ್ಸ್ ಬೆಂಬಲ ನೀಡಿದೆ. ಚಿತ್ರದಲ್ಲಿ ಮಲಯಾಳಂ ನಟ ಮೋಹನ್ಲಾಲ್, ಕನ್ನಡದ ನಟ ಶಿವರಾಜ್ಕುಮಾರ್ ಮತ್ತು ಜಾಕಿ ಶ್ರಾಫ್ ಸೇರಿದಂತೆ ಭಾರತೀಯ ಚಿತ್ರೋದ್ಯಮದ ದಿಗ್ಗಜರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಟೈಗರ್ ಮುತ್ತುವೇಲ್ ಪಾಂಡಿಯನ್ ಎಂಬ ನಿವೃತ್ತ ಜೈಲರ್ ಪಾತ್ರದಲ್ಲಿ ರಜನಿಕಾಂತ್ ಕಾಣಿಸಿಕೊಂಡಿದ್ದಾರೆ. ಚಿತ್ರವು ವಿಗ್ರಹ ಕಳ್ಳಸಾಗಣೆದಾರ ಮತ್ತು ಆತನ ಹಿಡಿತದಿಂದ ತನ್ನ ಮಗನನ್ನು ರಕ್ಷಿಸಿಕೊಳ್ಳುವ ಸುತ್ತ ಸುತ್ತುತ್ತದೆ.
ಚಿತ್ರದ ಇತರ ತಾರಾಗಣದಲ್ಲಿ ರಮ್ಯಾ ಕೃಷ್ಣ, ವಸಂತ್ ರವಿ, ವಿನಾಯಕ್, ಯೋಗಿ ಬಾಬು, ಮಿರ್ನಾ, ಸುನೀಲ್, ತಮನ್ನಾ ಸೇರಿದಂತೆ ಇತರರು ಇದ್ದಾರೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಡಾರ್ಕ್ ಕಾಮಿಡಿ ಆಕ್ಷನ್ ಡ್ರಾಮಾಗೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಕರಾಗಿದ್ದಾರೆ ಮತ್ತು ವಿಜಯ್ ಕಾರ್ತಿಕ್ ಕಣ್ಣನ್ ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ. ಬೀಸ್ಟ್, ಡಾಕ್ಟರ್ ಮತ್ತು ಕೊಲಮಾವು ಕೋಕಿಲಾ ನಂತರ ನೆಲ್ಸನ್ ನಿರ್ದೇಶನದ ನಾಲ್ಕನೇ ಚಿತ್ರ ಜೈಲರ್ ಆಗಿದೆ.
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…