ಚಿತ್ರ ಮಂಜರಿ

ಸೂಪರ್‌ಸ್ಟಾರ್‌ ರಜನಿಕಾಂತ್‌ ಅಭಿನಯದ ಜೈಲರ್ ಸಿನಿಮಾ ಮೊದಲ ವಾರ ಗಳಿಸಿದ್ದೆಷ್ಟು?

ಇತ್ತೀಚೆಗೆ ಬಿಡುಗಡೆಯಾದ ರಜಿನಿಕಾಂತ್ ಅಭಿನಯದ ತಮಿಳು ಚಿತ್ರ ಜೈಲರ್, ಮೊದಲ ವಾರದಲ್ಲಿ ಬಾಕ್ಸ್ ಆಫೀಸ್‌ನಲ್ಲಿ 375.40 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎಂದು ಚಿತ್ರತಂಡ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದೆ.

ನೆಲ್ಸನ್ ದಿಲೀಪ್‌ಕುಮಾರ್ ಬರೆದು, ನಿರ್ದೇಶಿಸಿದ ಈ ಚಿತ್ರಕ್ಕೆ ಸನ್ ಪಿಕ್ಚರ್ಸ್ ಬೆಂಬಲ ನೀಡಿದೆ. ಚಿತ್ರದಲ್ಲಿ ಮಲಯಾಳಂ ನಟ ಮೋಹನ್‌ಲಾಲ್, ಕನ್ನಡದ ನಟ ಶಿವರಾಜ್‌ಕುಮಾರ್ ಮತ್ತು ಜಾಕಿ ಶ್ರಾಫ್ ಸೇರಿದಂತೆ ಭಾರತೀಯ ಚಿತ್ರೋದ್ಯಮದ ದಿಗ್ಗಜರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಟೈಗರ್ ಮುತ್ತುವೇಲ್‌ ಪಾಂಡಿಯನ್ ಎಂಬ ನಿವೃತ್ತ ಜೈಲರ್ ಪಾತ್ರದಲ್ಲಿ ರಜನಿಕಾಂತ್ ಕಾಣಿಸಿಕೊಂಡಿದ್ದಾರೆ. ಚಿತ್ರವು ವಿಗ್ರಹ ಕಳ್ಳಸಾಗಣೆದಾರ ಮತ್ತು ಆತನ ಹಿಡಿತದಿಂದ ತನ್ನ ಮಗನನ್ನು ರಕ್ಷಿಸಿಕೊಳ್ಳುವ ಸುತ್ತ ಸುತ್ತುತ್ತದೆ.

ಚಿತ್ರದ ಇತರ ತಾರಾಗಣದಲ್ಲಿ ರಮ್ಯಾ ಕೃಷ್ಣ, ವಸಂತ್ ರವಿ, ವಿನಾಯಕ್, ಯೋಗಿ ಬಾಬು, ಮಿರ್ನಾ, ಸುನೀಲ್, ತಮನ್ನಾ ಸೇರಿದಂತೆ ಇತರರು ಇದ್ದಾರೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಡಾರ್ಕ್ ಕಾಮಿಡಿ ಆಕ್ಷನ್ ಡ್ರಾಮಾಗೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಕರಾಗಿದ್ದಾರೆ ಮತ್ತು ವಿಜಯ್ ಕಾರ್ತಿಕ್ ಕಣ್ಣನ್ ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ. ಬೀಸ್ಟ್, ಡಾಕ್ಟರ್ ಮತ್ತು ಕೊಲಮಾವು ಕೋಕಿಲಾ ನಂತರ ನೆಲ್ಸನ್ ನಿರ್ದೇಶನದ ನಾಲ್ಕನೇ ಚಿತ್ರ ಜೈಲರ್ ಆಗಿದೆ.

andolanait

Recent Posts

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

1 hour ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

1 hour ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

2 hours ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

14 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

16 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

17 hours ago