ಇತ್ತೀಚೆಗೆ ಬಿಡುಗಡೆಯಾದ ರಜಿನಿಕಾಂತ್ ಅಭಿನಯದ ತಮಿಳು ಚಿತ್ರ ಜೈಲರ್, ಮೊದಲ ವಾರದಲ್ಲಿ ಬಾಕ್ಸ್ ಆಫೀಸ್ನಲ್ಲಿ 375.40 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎಂದು ಚಿತ್ರತಂಡ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದೆ.
ನೆಲ್ಸನ್ ದಿಲೀಪ್ಕುಮಾರ್ ಬರೆದು, ನಿರ್ದೇಶಿಸಿದ ಈ ಚಿತ್ರಕ್ಕೆ ಸನ್ ಪಿಕ್ಚರ್ಸ್ ಬೆಂಬಲ ನೀಡಿದೆ. ಚಿತ್ರದಲ್ಲಿ ಮಲಯಾಳಂ ನಟ ಮೋಹನ್ಲಾಲ್, ಕನ್ನಡದ ನಟ ಶಿವರಾಜ್ಕುಮಾರ್ ಮತ್ತು ಜಾಕಿ ಶ್ರಾಫ್ ಸೇರಿದಂತೆ ಭಾರತೀಯ ಚಿತ್ರೋದ್ಯಮದ ದಿಗ್ಗಜರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಟೈಗರ್ ಮುತ್ತುವೇಲ್ ಪಾಂಡಿಯನ್ ಎಂಬ ನಿವೃತ್ತ ಜೈಲರ್ ಪಾತ್ರದಲ್ಲಿ ರಜನಿಕಾಂತ್ ಕಾಣಿಸಿಕೊಂಡಿದ್ದಾರೆ. ಚಿತ್ರವು ವಿಗ್ರಹ ಕಳ್ಳಸಾಗಣೆದಾರ ಮತ್ತು ಆತನ ಹಿಡಿತದಿಂದ ತನ್ನ ಮಗನನ್ನು ರಕ್ಷಿಸಿಕೊಳ್ಳುವ ಸುತ್ತ ಸುತ್ತುತ್ತದೆ.
ಚಿತ್ರದ ಇತರ ತಾರಾಗಣದಲ್ಲಿ ರಮ್ಯಾ ಕೃಷ್ಣ, ವಸಂತ್ ರವಿ, ವಿನಾಯಕ್, ಯೋಗಿ ಬಾಬು, ಮಿರ್ನಾ, ಸುನೀಲ್, ತಮನ್ನಾ ಸೇರಿದಂತೆ ಇತರರು ಇದ್ದಾರೆ. ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಡಾರ್ಕ್ ಕಾಮಿಡಿ ಆಕ್ಷನ್ ಡ್ರಾಮಾಗೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಕರಾಗಿದ್ದಾರೆ ಮತ್ತು ವಿಜಯ್ ಕಾರ್ತಿಕ್ ಕಣ್ಣನ್ ಛಾಯಾಗ್ರಹಣವನ್ನು ನಿರ್ವಹಿಸಿದ್ದಾರೆ. ಬೀಸ್ಟ್, ಡಾಕ್ಟರ್ ಮತ್ತು ಕೊಲಮಾವು ಕೋಕಿಲಾ ನಂತರ ನೆಲ್ಸನ್ ನಿರ್ದೇಶನದ ನಾಲ್ಕನೇ ಚಿತ್ರ ಜೈಲರ್ ಆಗಿದೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…