ಚಿತ್ರ ಮಂಜರಿ

2023 ಮಾರ್ಚ್‌ 30 ರಿಂದ ʼಹೊಯ್ಸಳʼನಾಗಿ ಡಾಲಿ ಉತ್ಸವ ಶುರು

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ಅವರ 25ನೇ ಚಿತ್ರ ಹೊಯ್ಸಳ ಸಿನಿಮಾವು 2023 ಮಾರ್ಚ್‌ 30 ರಿಂದ ತೆರೆಯ ಮೇಲೆ ತನ್ನ ಅಬ್ಬರವನ್ನು ಶುರುವಿಡಲಿದೆ. ಈ ಬಗ್ಗೆ ನಟ ಡಾಲಿ ಧನಂಜಯ ಅವರೇ ತಮ್ಮ ಟ್ವೀಟರ್‌ ನಲ್ಲಿ ವಿಚಾರವನ್ನು ಹಂಚಿಕೊಳ್ಳುವುದರ ಮೂಲಕ ತಿಳಿಸಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಬಹುಪಾಲು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಸಲಾಗಿದೆ. ಡಾಲಿ ಧನಂಜಯ ಈ ಚಿತ್ರದಲ್ಲಿ ಗುರುದೇವ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ವಿಜಯ್ ನಾಗೇಂದ್ರ “ಹೊಯ್ಸಳ” ಚಿತ್ರದ ನಿರ್ದೇಶಕರು.  ಈ ಹಿಂದೆ ಗಣೇಶ್ ಅಭಿನಯದ “ಗೀತಾ” ಚಿತ್ರವನ್ನು ವಿಜಯ್ ನಾಗೇಂದ್ರ ನಿರ್ದೇಶನ ಮಾಡಿದ್ದರು.  ಅಜನೀಶ್ ಲೋಕನಾಥ್ ಆವರ  ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಇತ್ತೀಚೆಗೆ ನಾಯಕ ಧನಂಜಯ ಅವರ “ಹೊಯ್ಸಳ” ಚಿತ್ರದ ಫಸ್ಟ್ ಲುಕ್ ಸಹ ನಿರ್ಮಾಣ ಸಂಸ್ಥೆಯಾದ ಕೆ.ಆರ್.ಜಿ ಸ್ಟುಡಿಯೋಸ್ ನಿಂದ ಬಿಡುಗಡೆ ಮಾಡಿದ್ದು.ಇದೀಗ ಚಿತ್ರವು ತೆರೆ ಕಾಣಲಿರುವ ದಿನಾಂಕವನ್ನು ಅನಾವರಣಗೊಳಿಸಿದ್ದಾರೆ.

ಮೈಸೂರಿನ ಭಾಗದ ಚಿತ್ರೀಕರಣದಲ್ಲಿ ನಾಯಕ ಧನಂಜಯ, ನಾಯಕಿ ಅಮೃತ ಅಯ್ಯಂಗಾರ್, ಅಚ್ಯುತ್ ಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದ ಕಲಾವಿದರು ಭಾಗಿಯಾಗಿದ್ದಾರೆ. ಸಾಹಸ ನಿರ್ದೇಶಕರಾದ ದಿಲೀಪ್ ಸುಬ್ರಹ್ಮಣ್ಯ ಹಾಗೂ ಅರ್ಜುನ್ ಮಾಸ್ಟರ್ ಅವರ ಸಾಹಸ ಸಂಯೋಜನೆಯಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆದಿದೆ.

 

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago