ಚಿತ್ರ ಮಂಜರಿ

2023 ಮಾರ್ಚ್‌ 30 ರಿಂದ ʼಹೊಯ್ಸಳʼನಾಗಿ ಡಾಲಿ ಉತ್ಸವ ಶುರು

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ಅವರ 25ನೇ ಚಿತ್ರ ಹೊಯ್ಸಳ ಸಿನಿಮಾವು 2023 ಮಾರ್ಚ್‌ 30 ರಿಂದ ತೆರೆಯ ಮೇಲೆ ತನ್ನ ಅಬ್ಬರವನ್ನು ಶುರುವಿಡಲಿದೆ. ಈ ಬಗ್ಗೆ ನಟ ಡಾಲಿ ಧನಂಜಯ ಅವರೇ ತಮ್ಮ ಟ್ವೀಟರ್‌ ನಲ್ಲಿ ವಿಚಾರವನ್ನು ಹಂಚಿಕೊಳ್ಳುವುದರ ಮೂಲಕ ತಿಳಿಸಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಬಹುಪಾಲು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಸಲಾಗಿದೆ. ಡಾಲಿ ಧನಂಜಯ ಈ ಚಿತ್ರದಲ್ಲಿ ಗುರುದೇವ ಹೊಯ್ಸಳ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ವಿಜಯ್ ನಾಗೇಂದ್ರ “ಹೊಯ್ಸಳ” ಚಿತ್ರದ ನಿರ್ದೇಶಕರು.  ಈ ಹಿಂದೆ ಗಣೇಶ್ ಅಭಿನಯದ “ಗೀತಾ” ಚಿತ್ರವನ್ನು ವಿಜಯ್ ನಾಗೇಂದ್ರ ನಿರ್ದೇಶನ ಮಾಡಿದ್ದರು.  ಅಜನೀಶ್ ಲೋಕನಾಥ್ ಆವರ  ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಇತ್ತೀಚೆಗೆ ನಾಯಕ ಧನಂಜಯ ಅವರ “ಹೊಯ್ಸಳ” ಚಿತ್ರದ ಫಸ್ಟ್ ಲುಕ್ ಸಹ ನಿರ್ಮಾಣ ಸಂಸ್ಥೆಯಾದ ಕೆ.ಆರ್.ಜಿ ಸ್ಟುಡಿಯೋಸ್ ನಿಂದ ಬಿಡುಗಡೆ ಮಾಡಿದ್ದು.ಇದೀಗ ಚಿತ್ರವು ತೆರೆ ಕಾಣಲಿರುವ ದಿನಾಂಕವನ್ನು ಅನಾವರಣಗೊಳಿಸಿದ್ದಾರೆ.

ಮೈಸೂರಿನ ಭಾಗದ ಚಿತ್ರೀಕರಣದಲ್ಲಿ ನಾಯಕ ಧನಂಜಯ, ನಾಯಕಿ ಅಮೃತ ಅಯ್ಯಂಗಾರ್, ಅಚ್ಯುತ್ ಕುಮಾರ್, ಪ್ರತಾಪ್ ನಾರಾಯಣ್, ನವೀನ್ ಶಂಕರ್, ಅವಿನಾಶ್ ಕೆ.ಜಿ.ಎಫ್, ರಾಘು ಶಿವಮೊಗ್ಗ ಮುಂತಾದ ಕಲಾವಿದರು ಭಾಗಿಯಾಗಿದ್ದಾರೆ. ಸಾಹಸ ನಿರ್ದೇಶಕರಾದ ದಿಲೀಪ್ ಸುಬ್ರಹ್ಮಣ್ಯ ಹಾಗೂ ಅರ್ಜುನ್ ಮಾಸ್ಟರ್ ಅವರ ಸಾಹಸ ಸಂಯೋಜನೆಯಲ್ಲಿ ಸಾಹಸ ಸನ್ನಿವೇಶಗಳ ಚಿತ್ರೀಕರಣ ನಡೆದಿದೆ.

 

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

36 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago