ನಿನ್ನೆಯಷ್ಟೇ (ಫೆ.2) ರಂದು ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ ಹೊಂದಿದ್ದರು ಎಂಬ ಬಗ್ಗೆ ಪೂನಂ ಅವರ ಇನ್ಸ್ಟಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.
ಅವರ ಮ್ಯಾನೇಜರ್ ಗರ್ಭಕೋಶ ಕಂಠ ಕ್ಯಾನ್ಸರ್ನಿಂದಾಗಿ ಪೂನಂ ನಿಧನರಾಗಿದ್ದಾರೆ ಎಂದು ಪೋಸ್ಟ್ ಹಾಕಿ ಇಡೀ ಅಭಿಮಾನಿಗಳಿಗೆ ಶಾಕ್ ನೀಡಿದ್ದರು.
ಪೂನಂ ನಿಧನ ಇಡೀ ದೇಶವೇ ಚರ್ಚೆ ಮಾಡುವಂತೆ ಮಾಡಿತ್ತು. ಪೂನಂ ಸತ್ತಿರುವ ಸಮಾಚಾರದ ಹೊರತಾಗಿ ಬೇರೆ ಯಾವ ಫೋಟೋಗಳು ಆಚೆ ಬರಲಿಲ್ಲ. ಹಾಗಾಗಿ ಸಹಜವಾಗಿಯೇ ಸಾವಿನ ಬಗ್ಗೆ ಅನುಮಾನ ಮೂಡಿತ್ತು.
ಇದೀಗ ತಾನು ಬದುಕಿರುವ ಬಗ್ಗೆ ಸ್ವತಃ ಪೂನಂ ಅವರೇ ವಿಡಿಯೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ. ಹಾಗೆ ಮಸೇಜ್ ಮಾಡಲು ಕಾರಣವಿದೆ. ಗರ್ಭಕೋಶ ಕಂಠ ಕ್ಯಾನ್ಸರ್ ಕುರಿತಾದ ಜಾಗೃತಿ ಮೂಡಿಸಬೇಕಿತ್ತು. ಹಾಗಾಗಿ ಈ ಪೋಸ್ಟ್ ಮಾಡಲಾಯಿತು. ದಯವಿಟ್ಟು ಈ ಕ್ಯಾನ್ಸರ್ ಕುರಿತಂತೆ ಜಾಗೃತ ವಹಿಸಿ ಎಂದು ಪೂನಂ ವಿಡಿಯೋ ಮೂಲಕ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ‘ಬಿಟ್ಟಿ ಪ್ರಚಾರ ಪಡೆಯಲು ಅವರು ಈ ರೀತಿ ಮಾಡಿದ್ದಾರೆ’ ಎಂದು ಅನೇಕರು ಹೇಳಿದ್ದಾರೆ.
ಪೂನಂ ಬದುಕಿರುವ ಸಮಾಚಾರ ತಿಳಿದು ಅಭಿಮಾನಿಗಳು ಸಂಭ್ರಮಿಸುತ್ತಿದ್ದರೆ, ಜಗತ್ತನ್ನೇ ಫೂಲ್ ಮಾಡಿದ ಪೂನಂರನ್ನು ಕೆಲವರು ತರಾಟೆಗೂ ತೆಗೆದುಕೊಂಡಿದ್ದಾರೆ. ಏನೇ ಇರಲಿ.. ಈ ಮಾರ್ಗದ ಮೂಲಕ ಜಾಗೃತಿ ಮೂಡಿಸುವುದು ತರವಲ್ಲ ಎನ್ನುವುದು ಅನೇಕರ ಅಭಿಪ್ರಾಯವಾಗಿದೆ.
ಪೋಸ್ಟ್ ನಲ್ಲೇನಿದೆ? : ‘ನಾನು ಬದುಕಿದ್ದೇನೆ. ಗರ್ಭಕಂಠ ಕ್ಯಾನ್ಸರ್ನಿಂದ ನಾನು ಸತ್ತಿಲ್ಲ. ಆದರೆ, ಈ ರೋಗವನ್ನು ಹೇಗೆ ಎದುರಿಸಬೇಕು ಎನ್ನುವ ಜ್ಞಾನ ಇಲ್ಲದೆ ಸಾವಿರಾರು ಮಹಿಳೆಯರು ಸಾಯುತ್ತಿದ್ದಾರೆ. ಇತರ ಕೆಲವು ಕ್ಯಾನ್ಸರ್ಗಳಿಗಿಂತ ಇದು ಭಿನ್ನವಾಗಿದೆ. ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಯಬಹುದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳಿಂದ ಇದು ಸಾಧ್ಯ. ಈ ಕಾಯಿಲೆಯಿಂದ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ’ ಎಂದು ಅವರು ಹೇಳಿದ್ದಾರೆ. #DeathToCervicalCancer ಎನ್ನುವ ಹ್ಯಾಶ್ ಟ್ಯಾಗ್ ಮೂಲಕ ವೀಡಿಯೊ ಒಂದನ್ನು ಹಂಚಿಕೊಂಡು ತಾವು ಬದುಕಿರುವ ಬಗ್ಗೆ ತಿಳಿಸಿದ್ದಾರೆ.
https://www.instagram.com/reel/C24C5DCtyRU/?utm_source=ig_web_button_share_sheet
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…