ಚಿತ್ರ ಮಂಜರಿ

ʼನಾನು ಬದುಕಿದ್ದೇನೆʼ : ವಿಡಿಯೋ ಮಾಡಿ ಶಾಕ್ ಕೊಟ್ಟ ಪೂನಂ ಪಾಂಡೆ

ನಿನ್ನೆಯಷ್ಟೇ (ಫೆ.2) ರಂದು ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ ಹೊಂದಿದ್ದರು ಎಂಬ ಬಗ್ಗೆ ಪೂನಂ ಅವರ ಇನ್ಸ್ಟಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಅವರ ಮ್ಯಾನೇಜರ್ ಗರ್ಭಕೋಶ ಕಂಠ ಕ್ಯಾನ್ಸರ್‌ನಿಂದಾಗಿ ಪೂನಂ ನಿಧನರಾಗಿದ್ದಾರೆ ಎಂದು ಪೋಸ್ಟ್ ಹಾಕಿ ಇಡೀ ಅಭಿಮಾನಿಗಳಿಗೆ ಶಾಕ್ ನೀಡಿದ್ದರು.

ಪೂನಂ ನಿಧನ ಇಡೀ ದೇಶವೇ ಚರ್ಚೆ ಮಾಡುವಂತೆ ಮಾಡಿತ್ತು. ಪೂನಂ ಸತ್ತಿರುವ ಸಮಾಚಾರದ ಹೊರತಾಗಿ ಬೇರೆ ಯಾವ ಫೋಟೋಗಳು ಆಚೆ ಬರಲಿಲ್ಲ. ಹಾಗಾಗಿ ಸಹಜವಾಗಿಯೇ ಸಾವಿನ ಬಗ್ಗೆ ಅನುಮಾನ ಮೂಡಿತ್ತು.

ಇದೀಗ ತಾನು ಬದುಕಿರುವ ಬಗ್ಗೆ ಸ್ವತಃ ಪೂನಂ ಅವರೇ ವಿಡಿಯೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದಾರೆ. ಹಾಗೆ ಮಸೇಜ್ ಮಾಡಲು ಕಾರಣವಿದೆ. ಗರ್ಭಕೋಶ ಕಂಠ ಕ್ಯಾನ್ಸರ್ ಕುರಿತಾದ ಜಾಗೃತಿ ಮೂಡಿಸಬೇಕಿತ್ತು. ಹಾಗಾಗಿ ಈ ಪೋಸ್ಟ್ ಮಾಡಲಾಯಿತು. ದಯವಿಟ್ಟು ಈ ಕ್ಯಾನ್ಸರ್ ಕುರಿತಂತೆ ಜಾಗೃತ ವಹಿಸಿ ಎಂದು ಪೂನಂ ವಿಡಿಯೋ ಮೂಲಕ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ‘ಬಿಟ್ಟಿ ಪ್ರಚಾರ ಪಡೆಯಲು ಅವರು ಈ ರೀತಿ ಮಾಡಿದ್ದಾರೆ’ ಎಂದು ಅನೇಕರು ಹೇಳಿದ್ದಾರೆ.

ಪೂನಂ ಬದುಕಿರುವ ಸಮಾಚಾರ ತಿಳಿದು ಅಭಿಮಾನಿಗಳು ಸಂಭ್ರಮಿಸುತ್ತಿದ್ದರೆ, ಜಗತ್ತನ್ನೇ ಫೂಲ್ ಮಾಡಿದ ಪೂನಂರನ್ನು ಕೆಲವರು ತರಾಟೆಗೂ ತೆಗೆದುಕೊಂಡಿದ್ದಾರೆ. ಏನೇ ಇರಲಿ.. ಈ ಮಾರ್ಗದ ಮೂಲಕ ಜಾಗೃತಿ ಮೂಡಿಸುವುದು ತರವಲ್ಲ ಎನ್ನುವುದು ಅನೇಕರ ಅಭಿಪ್ರಾಯವಾಗಿದೆ.

ಪೋಸ್ಟ್​ ನಲ್ಲೇನಿದೆ? : ‘ನಾನು ಬದುಕಿದ್ದೇನೆ. ಗರ್ಭಕಂಠ ಕ್ಯಾನ್ಸರ್​ನಿಂದ ನಾನು ಸತ್ತಿಲ್ಲ. ಆದರೆ, ಈ ರೋಗವನ್ನು ಹೇಗೆ ಎದುರಿಸಬೇಕು ಎನ್ನುವ ಜ್ಞಾನ ಇಲ್ಲದೆ ಸಾವಿರಾರು ಮಹಿಳೆಯರು ಸಾಯುತ್ತಿದ್ದಾರೆ. ಇತರ ಕೆಲವು ಕ್ಯಾನ್ಸರ್‌ಗಳಿಗಿಂತ ಇದು ಭಿನ್ನವಾಗಿದೆ. ಗರ್ಭಕಂಠದ ಕ್ಯಾನ್ಸರ್ ಸಂಪೂರ್ಣವಾಗಿ ತಡೆಯಬಹುದು. HPV ಲಸಿಕೆ ಮತ್ತು ಆರಂಭಿಕ ಪತ್ತೆ ಪರೀಕ್ಷೆಗಳಿಂದ ಇದು ಸಾಧ್ಯ. ಈ ಕಾಯಿಲೆಯಿಂದ ತಮ್ಮ ಪ್ರಾಣ ಕಳೆದುಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಕೈಯಲ್ಲೇ ಇದೆ’ ಎಂದು ಅವರು ಹೇಳಿದ್ದಾರೆ. #DeathToCervicalCancer ಎನ್ನುವ ಹ್ಯಾಶ್ ಟ್ಯಾಗ್ ಮೂಲಕ ವೀಡಿಯೊ ಒಂದನ್ನು ಹಂಚಿಕೊಂಡು ತಾವು ಬದುಕಿರುವ ಬಗ್ಗೆ ತಿಳಿಸಿದ್ದಾರೆ.

https://www.instagram.com/reel/C24C5DCtyRU/?utm_source=ig_web_button_share_sheet

andolanait

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

3 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

3 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

3 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

3 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

3 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

3 hours ago