ಚಿತ್ರ ಮಂಜರಿ

ಶಿವರಾಜ್ ಕುಮಾರ್ ಅವರ ಕ್ಷಮೆ ನಾನು ಸ್ವೀಕರಿಸಲ್ಲ: ಮೌನ ಮುರಿದ ನಟ ಸಿದ್ದಾರ್ಥ್

ತಮಿಳು ನಟ ಸಿದ್ದಾರ್ಥ್ ಅವರು ಬೆಂಗಳೂರಿನಲ್ಲಿ ನಡೆಸುತ್ತಿದ್ದ ಪತ್ರಿಕಾಗೋಷ್ಠಿಗೆ ಕನ್ನಡಪರ ಸಂಘಟನೆಗಳು ಅಡ್ಡಿ ಪಡಿಸಿದ ಬಳಿಕ, ನಟ ಶಿವರಾಜ್‌ ಕುಮಾರ್‌ ಅವರು ಕ್ಷಮೆ ಕೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದಾರ್ಥ್‌, ಶಿವರಾಜ್‌ ಕುಮಾರ್‌ ಅವರು ಕ್ಷಮೆ ಕೇಳುವ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ನಮ್ಮ ಚಿತ್ರದ ಬಿಡುಗಡೆಯ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದೆವು. ಈ ವೇಳೆ ಕೆಲವರು ಅಡ್ಡಿ ಪಡಿಸಿದರು. ಇದಾದ ಬಳಿಕ ಕನ್ನಡ ಸಿನಿಮಾ ಉದ್ಯಮದ ಪರವಾಗಿ ಹಿರಿಯ ನಟ ಶಿವರಾಜ್‌ ಕುಮಾರ್ ಅವರು ಕ್ಷಮೆ ಕೋರಿದ್ದಾರೆ. ಆದರೆ, ಇದನ್ನು ನಾನು ಸ್ವೀಕರಿಸಲಾಗುವುದಿಲ್ಲ. ಈ ಘಟನೆಗೂ ನಟ ಶಿವರಾಜ್​ಕುಮಾರ್​ ಅವರಿಗೂ ಯಾವುದೇ ಸಂಬಂಧವಿಲ್ಲ. ಆದರೆ, ತಮ್ಮ ಉದಾತ್ತ ಹೃದಯದಿಂದಾಗಿ ಅವರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಸಿದ್ದಾರ್ಥ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿದ್ದ ತಮ್ಮ ಸುದ್ದಿಗೋಷ್ಠಿಯಲ್ಲಿ ಮಧ್ಯಪ್ರವೇಶಿಸಿದ ಕನ್ನಡ ಸಂಘಟನೆಯ ಕಾರ್ಯಕರ್ತರು ತಮ್ಮ ಸಿನಿಮಾ ಪ್ರಚಾರವನ್ನು ಅರ್ಧಕ್ಕೆ ನಿಲ್ಲಿಸಿದ್ದ ಘಟನೆಗೆ ಸಂಬಂಧಿಸಿದಂತೆ ಇದೇ ಮೊದಲಿಗೆ ಪ್ರತಿಕ್ರಿಯಿಸಿರುವ ನಟ ಸಿದ್ಧಾರ್ಥ್ ‘ಘಟನೆಯಿಂದ ನನಗೆ ನಿರಾಸೆಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಟ ಸಿದ್ದಾರ್ಥ್ ಅವರಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದರು. ಕನ್ನಡಿಗರು ಎಲ್ಲರನ್ನೂ ಸ್ವಾಗತಿಸುತ್ತೇವೆ. ಪ್ರತಿಯೊಬ್ಬರಿಗೂ ಸಮಸ್ಯೆ ಇದೆ. ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನು ಮಾಡಬೇಕು. ನಾವು ಏನೇ ಮಾಡಿದರೂ ಬೇರೊಬ್ಬರಿಗೆ ಹರ್ಟ್ ಆಗಬಾರದು. ನಟ ಸಿದ್ದಾರ್ಥ್ ಅವರಿಗೆ ನಾನು ಈ ಮೂಲಕ ಕ್ಷಮೆ ಕೇಳುತ್ತೇನೆ. ಚಿಕ್ಕು ಚಿತ್ರದ ಪ್ರಚಾರಾರ್ಥ ಅವರು ಸುದ್ದಿಗೋಷ್ಠಿ ಕರೆದಿದ್ದರು. ಅದಕ್ಕೆ ಅಡ್ಡಿಪಡಿಸಲಾಗಿತ್ತು. ಅದಕ್ಕೆ ನಾನು ಕ್ಷಮೆ ಕೋರುತ್ತೇನೆ ಎಂದು ಶಿವಣ್ಣ ತಿಳಿಸಿದ್ದರು.

ಈ ಘಟನೆಯಲ್ಲಿ ಅವರ ತಪ್ಪು ಏನೂ ಇಲ್ಲ. ಅವರು‌ ನನಗಿಂತ ದೊಡ್ಡವರು, ಯಾರೋ ಮಾಡಿದ ತಪ್ಪಿಗೆ ಅವರು ಏಕೆ‌ ಕ್ಷಮೆ ಕೇಳಬೇಕು. ನನ್ನ ಸಿನಿಮಾವನ್ನು‌ ಕರ್ನಾಟಕ‌ ಜನರು ಕೂಡಾ ನೋಡುತ್ತಿದ್ದಾರೆ. ಅಲ್ಲಿ ನನ್ನ ಅಭಿಮಾನಿಗಳಿದ್ದಾರೆ‌.‌ ನಮಗೆ ಸಿನಿಮಾ‌ ಮುಖ್ಯ. ಅದನ್ನು ಕನ್ನಡಿಗರು ಮೆಚ್ಚಿದ್ದಾರೆ ಎಂದು‌ ಸಿದ್ದಾರ್ಥ್ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

andolanait

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 days ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 days ago