ಚಿತ್ರ ಮಂಜರಿ

ಶಿವರಾಜ್ ಕುಮಾರ್ ಅವರ ಕ್ಷಮೆ ನಾನು ಸ್ವೀಕರಿಸಲ್ಲ: ಮೌನ ಮುರಿದ ನಟ ಸಿದ್ದಾರ್ಥ್

ತಮಿಳು ನಟ ಸಿದ್ದಾರ್ಥ್ ಅವರು ಬೆಂಗಳೂರಿನಲ್ಲಿ ನಡೆಸುತ್ತಿದ್ದ ಪತ್ರಿಕಾಗೋಷ್ಠಿಗೆ ಕನ್ನಡಪರ ಸಂಘಟನೆಗಳು ಅಡ್ಡಿ ಪಡಿಸಿದ ಬಳಿಕ, ನಟ ಶಿವರಾಜ್‌ ಕುಮಾರ್‌ ಅವರು ಕ್ಷಮೆ ಕೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದಾರ್ಥ್‌, ಶಿವರಾಜ್‌ ಕುಮಾರ್‌ ಅವರು ಕ್ಷಮೆ ಕೇಳುವ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ನಮ್ಮ ಚಿತ್ರದ ಬಿಡುಗಡೆಯ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದೆವು. ಈ ವೇಳೆ ಕೆಲವರು ಅಡ್ಡಿ ಪಡಿಸಿದರು. ಇದಾದ ಬಳಿಕ ಕನ್ನಡ ಸಿನಿಮಾ ಉದ್ಯಮದ ಪರವಾಗಿ ಹಿರಿಯ ನಟ ಶಿವರಾಜ್‌ ಕುಮಾರ್ ಅವರು ಕ್ಷಮೆ ಕೋರಿದ್ದಾರೆ. ಆದರೆ, ಇದನ್ನು ನಾನು ಸ್ವೀಕರಿಸಲಾಗುವುದಿಲ್ಲ. ಈ ಘಟನೆಗೂ ನಟ ಶಿವರಾಜ್​ಕುಮಾರ್​ ಅವರಿಗೂ ಯಾವುದೇ ಸಂಬಂಧವಿಲ್ಲ. ಆದರೆ, ತಮ್ಮ ಉದಾತ್ತ ಹೃದಯದಿಂದಾಗಿ ಅವರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಸಿದ್ದಾರ್ಥ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿದ್ದ ತಮ್ಮ ಸುದ್ದಿಗೋಷ್ಠಿಯಲ್ಲಿ ಮಧ್ಯಪ್ರವೇಶಿಸಿದ ಕನ್ನಡ ಸಂಘಟನೆಯ ಕಾರ್ಯಕರ್ತರು ತಮ್ಮ ಸಿನಿಮಾ ಪ್ರಚಾರವನ್ನು ಅರ್ಧಕ್ಕೆ ನಿಲ್ಲಿಸಿದ್ದ ಘಟನೆಗೆ ಸಂಬಂಧಿಸಿದಂತೆ ಇದೇ ಮೊದಲಿಗೆ ಪ್ರತಿಕ್ರಿಯಿಸಿರುವ ನಟ ಸಿದ್ಧಾರ್ಥ್ ‘ಘಟನೆಯಿಂದ ನನಗೆ ನಿರಾಸೆಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಟ ಸಿದ್ದಾರ್ಥ್ ಅವರಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದರು. ಕನ್ನಡಿಗರು ಎಲ್ಲರನ್ನೂ ಸ್ವಾಗತಿಸುತ್ತೇವೆ. ಪ್ರತಿಯೊಬ್ಬರಿಗೂ ಸಮಸ್ಯೆ ಇದೆ. ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನು ಮಾಡಬೇಕು. ನಾವು ಏನೇ ಮಾಡಿದರೂ ಬೇರೊಬ್ಬರಿಗೆ ಹರ್ಟ್ ಆಗಬಾರದು. ನಟ ಸಿದ್ದಾರ್ಥ್ ಅವರಿಗೆ ನಾನು ಈ ಮೂಲಕ ಕ್ಷಮೆ ಕೇಳುತ್ತೇನೆ. ಚಿಕ್ಕು ಚಿತ್ರದ ಪ್ರಚಾರಾರ್ಥ ಅವರು ಸುದ್ದಿಗೋಷ್ಠಿ ಕರೆದಿದ್ದರು. ಅದಕ್ಕೆ ಅಡ್ಡಿಪಡಿಸಲಾಗಿತ್ತು. ಅದಕ್ಕೆ ನಾನು ಕ್ಷಮೆ ಕೋರುತ್ತೇನೆ ಎಂದು ಶಿವಣ್ಣ ತಿಳಿಸಿದ್ದರು.

ಈ ಘಟನೆಯಲ್ಲಿ ಅವರ ತಪ್ಪು ಏನೂ ಇಲ್ಲ. ಅವರು‌ ನನಗಿಂತ ದೊಡ್ಡವರು, ಯಾರೋ ಮಾಡಿದ ತಪ್ಪಿಗೆ ಅವರು ಏಕೆ‌ ಕ್ಷಮೆ ಕೇಳಬೇಕು. ನನ್ನ ಸಿನಿಮಾವನ್ನು‌ ಕರ್ನಾಟಕ‌ ಜನರು ಕೂಡಾ ನೋಡುತ್ತಿದ್ದಾರೆ. ಅಲ್ಲಿ ನನ್ನ ಅಭಿಮಾನಿಗಳಿದ್ದಾರೆ‌.‌ ನಮಗೆ ಸಿನಿಮಾ‌ ಮುಖ್ಯ. ಅದನ್ನು ಕನ್ನಡಿಗರು ಮೆಚ್ಚಿದ್ದಾರೆ ಎಂದು‌ ಸಿದ್ದಾರ್ಥ್ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

andolanait

Recent Posts

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

16 seconds ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

8 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

9 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

11 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

11 hours ago