ಚಿತ್ರ ಮಂಜರಿ

ಶಿವರಾಜ್ ಕುಮಾರ್ ಅವರ ಕ್ಷಮೆ ನಾನು ಸ್ವೀಕರಿಸಲ್ಲ: ಮೌನ ಮುರಿದ ನಟ ಸಿದ್ದಾರ್ಥ್

ತಮಿಳು ನಟ ಸಿದ್ದಾರ್ಥ್ ಅವರು ಬೆಂಗಳೂರಿನಲ್ಲಿ ನಡೆಸುತ್ತಿದ್ದ ಪತ್ರಿಕಾಗೋಷ್ಠಿಗೆ ಕನ್ನಡಪರ ಸಂಘಟನೆಗಳು ಅಡ್ಡಿ ಪಡಿಸಿದ ಬಳಿಕ, ನಟ ಶಿವರಾಜ್‌ ಕುಮಾರ್‌ ಅವರು ಕ್ಷಮೆ ಕೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದಾರ್ಥ್‌, ಶಿವರಾಜ್‌ ಕುಮಾರ್‌ ಅವರು ಕ್ಷಮೆ ಕೇಳುವ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

ನಮ್ಮ ಚಿತ್ರದ ಬಿಡುಗಡೆಯ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದೆವು. ಈ ವೇಳೆ ಕೆಲವರು ಅಡ್ಡಿ ಪಡಿಸಿದರು. ಇದಾದ ಬಳಿಕ ಕನ್ನಡ ಸಿನಿಮಾ ಉದ್ಯಮದ ಪರವಾಗಿ ಹಿರಿಯ ನಟ ಶಿವರಾಜ್‌ ಕುಮಾರ್ ಅವರು ಕ್ಷಮೆ ಕೋರಿದ್ದಾರೆ. ಆದರೆ, ಇದನ್ನು ನಾನು ಸ್ವೀಕರಿಸಲಾಗುವುದಿಲ್ಲ. ಈ ಘಟನೆಗೂ ನಟ ಶಿವರಾಜ್​ಕುಮಾರ್​ ಅವರಿಗೂ ಯಾವುದೇ ಸಂಬಂಧವಿಲ್ಲ. ಆದರೆ, ತಮ್ಮ ಉದಾತ್ತ ಹೃದಯದಿಂದಾಗಿ ಅವರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಸಿದ್ದಾರ್ಥ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿದ್ದ ತಮ್ಮ ಸುದ್ದಿಗೋಷ್ಠಿಯಲ್ಲಿ ಮಧ್ಯಪ್ರವೇಶಿಸಿದ ಕನ್ನಡ ಸಂಘಟನೆಯ ಕಾರ್ಯಕರ್ತರು ತಮ್ಮ ಸಿನಿಮಾ ಪ್ರಚಾರವನ್ನು ಅರ್ಧಕ್ಕೆ ನಿಲ್ಲಿಸಿದ್ದ ಘಟನೆಗೆ ಸಂಬಂಧಿಸಿದಂತೆ ಇದೇ ಮೊದಲಿಗೆ ಪ್ರತಿಕ್ರಿಯಿಸಿರುವ ನಟ ಸಿದ್ಧಾರ್ಥ್ ‘ಘಟನೆಯಿಂದ ನನಗೆ ನಿರಾಸೆಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಟ ಸಿದ್ದಾರ್ಥ್ ಅವರಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದರು. ಕನ್ನಡಿಗರು ಎಲ್ಲರನ್ನೂ ಸ್ವಾಗತಿಸುತ್ತೇವೆ. ಪ್ರತಿಯೊಬ್ಬರಿಗೂ ಸಮಸ್ಯೆ ಇದೆ. ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನು ಮಾಡಬೇಕು. ನಾವು ಏನೇ ಮಾಡಿದರೂ ಬೇರೊಬ್ಬರಿಗೆ ಹರ್ಟ್ ಆಗಬಾರದು. ನಟ ಸಿದ್ದಾರ್ಥ್ ಅವರಿಗೆ ನಾನು ಈ ಮೂಲಕ ಕ್ಷಮೆ ಕೇಳುತ್ತೇನೆ. ಚಿಕ್ಕು ಚಿತ್ರದ ಪ್ರಚಾರಾರ್ಥ ಅವರು ಸುದ್ದಿಗೋಷ್ಠಿ ಕರೆದಿದ್ದರು. ಅದಕ್ಕೆ ಅಡ್ಡಿಪಡಿಸಲಾಗಿತ್ತು. ಅದಕ್ಕೆ ನಾನು ಕ್ಷಮೆ ಕೋರುತ್ತೇನೆ ಎಂದು ಶಿವಣ್ಣ ತಿಳಿಸಿದ್ದರು.

ಈ ಘಟನೆಯಲ್ಲಿ ಅವರ ತಪ್ಪು ಏನೂ ಇಲ್ಲ. ಅವರು‌ ನನಗಿಂತ ದೊಡ್ಡವರು, ಯಾರೋ ಮಾಡಿದ ತಪ್ಪಿಗೆ ಅವರು ಏಕೆ‌ ಕ್ಷಮೆ ಕೇಳಬೇಕು. ನನ್ನ ಸಿನಿಮಾವನ್ನು‌ ಕರ್ನಾಟಕ‌ ಜನರು ಕೂಡಾ ನೋಡುತ್ತಿದ್ದಾರೆ. ಅಲ್ಲಿ ನನ್ನ ಅಭಿಮಾನಿಗಳಿದ್ದಾರೆ‌.‌ ನಮಗೆ ಸಿನಿಮಾ‌ ಮುಖ್ಯ. ಅದನ್ನು ಕನ್ನಡಿಗರು ಮೆಚ್ಚಿದ್ದಾರೆ ಎಂದು‌ ಸಿದ್ದಾರ್ಥ್ ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

andolanait

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago