ಚಿತ್ರ ಮಂಜರಿ

ನನಗೆ ಗರ್ಲ್‌ ಫ್ರೆಂಡ್‌ ಇಲ್ಲ: ಬಿಗ್‌ಬಾಸ್‌ ವಿನ್ನರ್‌ ಕಾರ್ತಿಕ್‌ ಸ್ಪಷ್ಟನೆ!

ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‌ 10ರ ವಿನ್ನರ್‌ ಕಾರ್ತಿಕ್‌ ಮಹೇಶ್‌ ಅವರಿಗೆ ಗರ್ಲ್‌ ಫ್ರೆಂಡ್‌ ಇದ್ದಾರೆ ಎಂದು ಬಿಗ್‌ಬಾಸ್‌ ಮನೆಯಲ್ಲಿ ಇದ್ದಾಗ ಹಲವಾರು ರೀತಿಯಲ್ಲಿ ಚರ್ಚೆ ಮಾಡಲಾಯಿತು.

ದೊಡ್ಮನೆಯಲ್ಲಿ ಮೊದ ಮೊದಲ ಕಾರ್ತಿಕ್ ಮತ್ತು ಸಂಗೀತಾ ಸ್ನೇಹದ ಬಗ್ಗೆ ಮಾತನಾಡಲಾಯಿತು. ಆಮೇಲೆ ನಮ್ರತಾ ಅವರ ಹೆಸರಿನ ಜೊತೆ ತಳುಕು ಹಾಕಲಾಯಿತು. ನಮ್ರತಾ ಸೇರಿದಂತೆ ಹಲವರು ಕಾರ್ತಿಕ್ ಅವರಿಗೆ ಗರ್ಲ್ ಫ್ರೆಂಡ್ ಇದ್ದಾಳೆ ಎಂದು ಹೇಳಿದ್ದು, ಇದಕ್ಕೆಲ್ಲಾ ಈಗ ಕಾರ್ತಿಕ್‌ ಸ್ಪಷ್ಟನೆ ನೀಡಿದ್ದಾರೆ. ಅದೇನು ಗೊತ್ತಾ ಇಲ್ಲಿದೆ ನೋಡಿ?

ನನಗೆ ಗರ್ಲ್ ಫ್ರೆಂಡ್ ಇಲ್ಲ. ಅನೇಕ ಫ್ರೆಂಡ್ಸ್ ಇದ್ದಾರೆ. ನನ್ನ ಜೊತೆ ಬಿಗ್ ಬಾಸ್ ಮನೆಯಲ್ಲಿ ಯಾರೂ ಕನೆಕ್ಟ್ ಆಗಬಾರದು. ಹತ್ತಿರಕ್ಕೆ ಬರಬಾರದು ಎನ್ನುವ ಕಾರಣಕ್ಕಾಗಿ ಆ ರೀತಿ ಸುದ್ದಿಯನ್ನು ಹರಿಬಿಡಲಾಯಿತು ಎಂದು ಹೇಳಿದ್ದಾರೆ. ನನಗೆ ತುಂಬಾ ಕನಸುಗಳಿವೆ. ಅವುಗಳನ್ನು ಮುಂದುವರೆಸಿಕೊಂಡು ಹೋಗಬೇಕು. ಸದ್ಯಕ್ಕೆ ಗರ್ಲ್ ಫ್ರೆಂಡ್ ಕುರಿತಂತೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿದ್ದಾರೆ ಬಿಗ್‌ಬಾಸ್‌ ವಿನ್ನರ್‌ ಕಾರ್ತಿಕ್‌ ಮಹೇಶ್‌.

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಬಿಗ್‌ಬಾಸ್‌ ಕನ್ನಡ ಸೀಸನ್‌ 10 ರಲ್ಲಿ ಒಟ್ಟು 19ಜನ ಸ್ಪರ್ಧಿಗಳು ಭಾಗವಹಿಸಿದ್ದರು. ದೊಡ್ಮನೆಗೆ ಕೊನೆಯ ಗಳಿಗೆಯಲ್ಲಿ ತನ್ನ ನಿರ್ಧಾರ ಬದಲಿಸಿಕೊಂಡು ಕಾಲಿಟ್ಟ ಕಾರ್ತಿಕ್‌, ಎಲ್ಲಾ ರೀತಿಯ ನೋಲು ನಲಿವುಗಳನ್ನು ಕಂಡವರು.

ಫೈನಲಿಸ್ಟ್‌ ಲೀಸ್ಟ್‌ನಲ್ಲಿ ಕೊನೆಯದಾಗಿ ಆಯ್ಕೆಗೊಂಡ ಇವರು, ಅಪಾರ ಅಭಿಮಾನಿಗಳ ಪ್ರೀತಿ ವಿಶ್ವಾಸದ ಫಲದಿಂದಾಗಿ ಬಿಗ್‌ ಬಾಸ್‌ ಟ್ರೋಫಿಯನ್ನು ಗೆದ್ದರು. ಇನ್ನು ಮೊಲದ ರನ್ನರ್‌ ಅಪ್‌ ಆಗಿ ಡ್ರೋನ್‌ ಪ್ರತಾಪ್‌, ಎರಡನೇ ರನ್ನರ್‌ಅಪ್‌ ಸಂಗೀತ ಶೃಂಗೇರಿ, ಮೂರನೇ ರನ್ನರ್‌ ವಿನಯ್‌ ಗೌಡ ಮತ್ತು ನಾಲ್ಕನೇ ರನ್ನರ್‌ ಆಗಿ ವರ್ತೂರ್‌ ಸಂತೋಷ್‌ ಸ್ಥಾನ ಪಡೆದುಕೊಂಡರು.

andolanait

Recent Posts

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

30 mins ago

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…

56 mins ago

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್‌ ಸೇರಿದ ಧುರಂಧರ್-‌2

ಆದಿತ್ಯ ಧರ್‌ ನಿರ್ದೇಶನದ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…

1 hour ago

ಮೈಸೂರು | ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ…

1 hour ago

ಮೈಸೂರು | ವರ್ತುಲ ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…

2 hours ago

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌…

2 hours ago