ಚಿತ್ರ ಮಂಜರಿ

ನನಗೂ ಸೂಪರ್ ಸ್ಟಾರ್ ಪದಕ್ಕೂ ಯಾಕೋ ಕೂಡಿ ಬರುತ್ತಿಲ್ಲ : ರಜನಿಕಾಂತ್

ನೆನ್ನೆಯಷ್ಟೇ ರಜನಿಕಾಂತ್ ನಟನೆಯ ಜೈಲರ್ ಸಿನಿಮಾದ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಜನಿಕಾಂತ್ ಸೇರಿದಂತೆ ಸಾಕಷ್ಟು ಗಣ್ಯರು ಹಾಜರಿದ್ದರು. ಈ ಸಂದರ್ಭದಲ್ಲಿ ಮನಬಿಚ್ಚಿ ಮಾತನಾಡಿದ ರಜನಿ, ಅಭಿಮಾನಿಗಳು ತಮ್ಮನ್ನು ಅಭಿಮಾನದಿಂದ ಕರೆಯುವ ಸೂಪರ್ ಸ್ಟಾರ್ ಪದವನ್ನು ಕಿತ್ತುಹಾಕಿ ಎಂದು ಹೇಳಿದ್ದರ ಕುರಿತು ಮಾತನಾಡಿದರು.

ಈ ಸೂಪರ್ ಸ್ಟಾರ್ ಪದ ಯಾವಾಗಲೂ ನನಗೆ ಸಮಸ್ಯೆಯನ್ನುಂಟು ಮಾಡಿದೆ. ಜೈಲರ್ ಸಿನಿಮಾದ ಹಾಡಿನಲ್ಲೂ ಸೂಪರ್ ಸ್ಟಾರ್ ಎನ್ನುವ ಪದ ನುಸುಳಿದೆ. ಸಾಹಿತ್ಯ ಬರೆದಿರುವ ಸೂಪರ್ ಸುಬು ಅವರಿಗೆ ಹೇಳಿದ್ದೆ. ನನಗೂ ಈ ಸೂಪರ್ ಸ್ಟಾರ್ ಪದಕ್ಕೂ ಯಾಕೋ ಕೂಡಿ ಬರುತ್ತಿಲ್ಲ ಎಂದರು. ಜೊತೆಗೆ ಜೈಲರ್ ಸಿನಿಮಾದ ನಿರ್ದೇಶಕ ನೆಲ್ಸನ್ ಅವರನ್ನು ಈ ಸಿನಿಮಾದಿಂದ ತೆಗೆದುಹಾಕಿ ಎಂದೆಲ್ಲ ವಿರೋಧ ಬಂತು. ಅದಕ್ಕೆ ನಾನು ಒಪ್ಪಲಿಲ್ಲ ಎನ್ನುವ ಮಾತುಗಳನ್ನೂ ಆಡಿದರು.

ಒಂದು ಕಡೆ ಸಿನಿಮಾದ ಹಾಡುಗಳ ಸಂಭ್ರಮ ಜೋರಾಗಿದ್ದರೆ ಮತ್ತೊಂದು ಕಡೆ ಚಿತ್ರದ ಟೈಟಲ್ ಕುರಿತು ಸಂಕಷ್ಟ ಎದುರಾಗಿದೆ. ಈ ಸಿನಿಮಾ ಮೂರು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದ್ದು, ಈ ಸಂದರ್ಭದಲ್ಲಿ ಮಲಯಾಳಂ ನಿರ್ದೇಶಕರೊಬ್ಬರು ಟೈಟಲ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ.

ಮಲಯಾಳಂನಲ್ಲಿ ಈಗಾಗಲೇ ನಿರ್ದೇಶಕ ಸಕ್ಕಿರ್ ಮಡತ್ತಿಲ್ಲ ಜೈಲರ್ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಅದು ಕೂಡ ಬಿಡುಗಡೆಗೆ ಸಿದ್ಧವಾಗಿತ್ತು. ಮಲಯಾಳಂನಲ್ಲಿ ರಜನಿ ಜೈಲರ್ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದರಿಂದ, ಮಲಯಾಳಂನಲ್ಲಿ ಟೈಟಲ್ ಬದಲಾಯಿಸಿ ರಿಲೀಸ್ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಆದರೆ, ಅದು ಆಗುವುದಿಲ್ಲ ಎಂದು ಸನ್ ಪಿಕ್ಚರ್ ನಿರ್ಮಾಣ ಸಂಸ್ಥೆ ಉತ್ತರ ಬರೆದಿತ್ತು.

ಈಗ ಸಕ್ಕಿರ್ ಮಡತ್ತಿಲ್ಲ ತಮಿಳಿನ ಜೈಲರ್ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಜೊತೆ ಜೊತೆಗೆ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಿಲೀಸ್ ದಿನವೇ ಮಲಯಾಳಂನಲ್ಲಿ ತಮ್ಮ ಜೈಲರ್ ಚಿತ್ರವನ್ನು ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ. ಆಗಸ್ಟ್ 10ಕ್ಕೆ ತಮ್ಮ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

lokesh

Recent Posts

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 hour ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

2 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

3 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

3 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

4 hours ago

ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ

ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು…

4 hours ago