ಚಿತ್ರ ಮಂಜರಿ

ನನಗೂ ಸೂಪರ್ ಸ್ಟಾರ್ ಪದಕ್ಕೂ ಯಾಕೋ ಕೂಡಿ ಬರುತ್ತಿಲ್ಲ : ರಜನಿಕಾಂತ್

ನೆನ್ನೆಯಷ್ಟೇ ರಜನಿಕಾಂತ್ ನಟನೆಯ ಜೈಲರ್ ಸಿನಿಮಾದ ಹಾಡುಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಜನಿಕಾಂತ್ ಸೇರಿದಂತೆ ಸಾಕಷ್ಟು ಗಣ್ಯರು ಹಾಜರಿದ್ದರು. ಈ ಸಂದರ್ಭದಲ್ಲಿ ಮನಬಿಚ್ಚಿ ಮಾತನಾಡಿದ ರಜನಿ, ಅಭಿಮಾನಿಗಳು ತಮ್ಮನ್ನು ಅಭಿಮಾನದಿಂದ ಕರೆಯುವ ಸೂಪರ್ ಸ್ಟಾರ್ ಪದವನ್ನು ಕಿತ್ತುಹಾಕಿ ಎಂದು ಹೇಳಿದ್ದರ ಕುರಿತು ಮಾತನಾಡಿದರು.

ಈ ಸೂಪರ್ ಸ್ಟಾರ್ ಪದ ಯಾವಾಗಲೂ ನನಗೆ ಸಮಸ್ಯೆಯನ್ನುಂಟು ಮಾಡಿದೆ. ಜೈಲರ್ ಸಿನಿಮಾದ ಹಾಡಿನಲ್ಲೂ ಸೂಪರ್ ಸ್ಟಾರ್ ಎನ್ನುವ ಪದ ನುಸುಳಿದೆ. ಸಾಹಿತ್ಯ ಬರೆದಿರುವ ಸೂಪರ್ ಸುಬು ಅವರಿಗೆ ಹೇಳಿದ್ದೆ. ನನಗೂ ಈ ಸೂಪರ್ ಸ್ಟಾರ್ ಪದಕ್ಕೂ ಯಾಕೋ ಕೂಡಿ ಬರುತ್ತಿಲ್ಲ ಎಂದರು. ಜೊತೆಗೆ ಜೈಲರ್ ಸಿನಿಮಾದ ನಿರ್ದೇಶಕ ನೆಲ್ಸನ್ ಅವರನ್ನು ಈ ಸಿನಿಮಾದಿಂದ ತೆಗೆದುಹಾಕಿ ಎಂದೆಲ್ಲ ವಿರೋಧ ಬಂತು. ಅದಕ್ಕೆ ನಾನು ಒಪ್ಪಲಿಲ್ಲ ಎನ್ನುವ ಮಾತುಗಳನ್ನೂ ಆಡಿದರು.

ಒಂದು ಕಡೆ ಸಿನಿಮಾದ ಹಾಡುಗಳ ಸಂಭ್ರಮ ಜೋರಾಗಿದ್ದರೆ ಮತ್ತೊಂದು ಕಡೆ ಚಿತ್ರದ ಟೈಟಲ್ ಕುರಿತು ಸಂಕಷ್ಟ ಎದುರಾಗಿದೆ. ಈ ಸಿನಿಮಾ ಮೂರು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದ್ದು, ಈ ಸಂದರ್ಭದಲ್ಲಿ ಮಲಯಾಳಂ ನಿರ್ದೇಶಕರೊಬ್ಬರು ಟೈಟಲ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ.

ಮಲಯಾಳಂನಲ್ಲಿ ಈಗಾಗಲೇ ನಿರ್ದೇಶಕ ಸಕ್ಕಿರ್ ಮಡತ್ತಿಲ್ಲ ಜೈಲರ್ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಅದು ಕೂಡ ಬಿಡುಗಡೆಗೆ ಸಿದ್ಧವಾಗಿತ್ತು. ಮಲಯಾಳಂನಲ್ಲಿ ರಜನಿ ಜೈಲರ್ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದರಿಂದ, ಮಲಯಾಳಂನಲ್ಲಿ ಟೈಟಲ್ ಬದಲಾಯಿಸಿ ರಿಲೀಸ್ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಆದರೆ, ಅದು ಆಗುವುದಿಲ್ಲ ಎಂದು ಸನ್ ಪಿಕ್ಚರ್ ನಿರ್ಮಾಣ ಸಂಸ್ಥೆ ಉತ್ತರ ಬರೆದಿತ್ತು.

ಈಗ ಸಕ್ಕಿರ್ ಮಡತ್ತಿಲ್ಲ ತಮಿಳಿನ ಜೈಲರ್ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಜೊತೆ ಜೊತೆಗೆ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಿಲೀಸ್ ದಿನವೇ ಮಲಯಾಳಂನಲ್ಲಿ ತಮ್ಮ ಜೈಲರ್ ಚಿತ್ರವನ್ನು ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ. ಆಗಸ್ಟ್ 10ಕ್ಕೆ ತಮ್ಮ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

lokesh

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

7 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

8 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

9 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

10 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

11 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

12 hours ago